ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಇತ್ತೀಚೆಗಷ್ಟೇ ಸರ್ಕಾರಿ ಶಾಲೆಯ ಬೋರ್ಡ್ ವೊಂದರ ವಿಚಾರವಾಗಿ ವಿವಾದ ಮಾಡಿಕೊಂಡಿದ್ದ ರಾಜ್ಯ ಸರ್ಕಾರ, ಇದೀಗ ಮತ್ತೊಂದು ಯಡವಟ್ಟು ಮಾಡಿಕೊಂಡಿದೆ. ರಾಷ್ಟ್ರಕವಿ ಕುವೆಂಪು ಅವರ ರಚನೆಯ ನಾಡಗೀತೆಯನ್ನು ಅನುದಾನಿತ, ಖಾಸಗಿ ಶಾಲೆಯಲ್ಲಿ ಕಡ್ಡಾಯದಿಂದ ವಿನಾಯ್ತಿ ನೀಡಿದೆ. ಇದೀಗ ಹೊಸ ವಿವಾದಕ್ಕೆ ಕಾರಣವಾಗಿದೆ.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹೊರಡಿಸಿರುವ ಆದೇಶದ ವಿರುದ್ಧ ಎಲ್ಲೆಡೆ ಆಕ್ರೋಶ ವ್ಯಕ್ತವಾಗುತ್ತಿದೆ. ನಾಡದ್ರೋಹಿ ಕಾಂಗ್ರೆಸ್ ಸರ್ಕಾರವೆಂದು ವಾಗ್ದಾಳಿ ನಡೆಸಲಾಗುತ್ತಿದೆ. ಸಚಿವರ ಗಮನಕ್ಕೆ ಬರದೆ ಅಧಿಕಾರಿಗಳು ಈ ರೀತಿ ಆದೇಶ ಹೊರಡಿಸಲು ಹೇಗೆ ಸಾಧ್ಯವೆಂದು ಪ್ರಶ್ನಿಸಲಾಗುತ್ತಿದೆ. ಒಟ್ಟಿನಲ್ಲಿ ಕಾಂಗ್ರೆಸ್ ಸರ್ಕಾರ ತಾನು ಏನು ಮಾಡುತ್ತಿದೆ ಎನ್ನುವ ಕನಿಷ್ಠ ಪ್ರಜ್ಞೆ ಇಲ್ಲದಂತೆ ವರ್ತಿಸುತ್ತಿದೆ ಎಂದು ವಾಗ್ದಾಳಿ ನಡೆಸಲಾಗುತ್ತಿದೆ.