ಸಮನ್ವಯ ಕವಿ ಕಣವಿ ಕಣ್ಮರೆ

271

ಪ್ರಜಾಸ್ತ್ರ ಸಾಹಿತ್ಯ ಮತ್ತು ರಂಗಭೂಮಿ

ಪ್ರಜಾಸ್ತ್ರ ಸುದ್ದಿ

ಧಾರವಾಡ: ನಾಡಿನ ಖ್ಯಾತ ಹಿರಿಯ ಕವಿ, ಸಮನ್ವಯ ಕವಿ ಎಂದೇ ಚಿರಪರಿಚತರಾದ ಚನ್ನವೀರ ಕಣವಿ(93) ಅವರು ಇಂದು ಮುಂಜಾನೆ ನಿಧನರಾಗಿದ್ದಾರೆ. ಅನಾರೋಗ್ಯದ ಕಾರಣಕ್ಕೆ ಜನವರಿ 14ರಂದು ಎಸ್ ಡಿಎಂ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಿಸದೆ ಇಂದು ನಿಧನರಾಗಿದ್ದಾರೆ.

ನಾಡೋಜ, ನೃಪತುಂಗ ಪ್ರಶಸ್ತಿ ಸೇರಿದಂತೆ ಹತ್ತು ಹಲವು ಪ್ರಶಸ್ತಿಗಳು ಇವರ ಮುಡಿಗೇರಿವೆ. ಆಸ್ಪತ್ರೆಗೆ ದಾಖಲಾದ ದಿನದಿಂದ ಗಣ್ಯರು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದರು. ಸಿಎಂ ಆದಿಯಾಗಿ ಕೇಂದ್ರ ಸಚಿವರು ಸಹ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ. ಇದೀಗ ಅವರ ನಿಧನದಿಂದಾಗಿ ಸಾಹಿತ್ಯ ಲೋಕದ ದೊಡ್ಡ ಕೊಂಡಿಯೊಂದು ಕಳಚಿಕೊಂಡಿದೆ.




Leave a Reply

Your email address will not be published. Required fields are marked *

error: Content is protected !!