ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕಾರ ಮಾಡಿರುವ ನೂತನ ಸಾರಥಿ ನಳೀನಕುಮಾರ ಕಟೀಲ ನೇತೃತ್ವದಲ್ಲಿ ಬಿಜೆಪಿ ಕೋರ್ ಕಮಿಟಿ ಸಭೆ ನಡೆಯಲಿದೆ. ಇಂದು ಮಧ್ಯಾಹ್ನ ನಡೆಯುವ ಸಭೆಯಲ್ಲಿ ನೆರೆ ಹಾವಳಿಯ ಬಗ್ಗೆ ಚರ್ಚೆ ನಡೆಯಲಿದೆ ಎನ್ನಲಾಗ್ತಿದೆ.
ಕೇಂದ್ರದಿಂದ ರಾಜ್ಯಕ್ಕೆ ಪರಿಹಾರ ಬಂದಿಲ್ಲ ಅನ್ನೋ ವಿಚಾರ ವಿಪಕ್ಷಗಳಿಗೆ ದೊಡ್ಡ ಅಸ್ತ್ರವಾಗಿದೆ. ಸಂತ್ರಸ್ತರಿಗೆ ಸರಿಯಾದ ನೆರವು ಸಿಗ್ತಿಲ್ಲ ಅನ್ನೋ ವಿಚಾರ ಹಾಗೂ ಡಿ.ಕೆ ಶಿವಕುಮಾರ ಅವರ ಬಂಧನದ ಬಗ್ಗೆಯೂ ಇಂದಿನ ಸಭೆಯಲ್ಲಿ ಚರ್ಚೆಗೆ ಬರುವ ವಿಷಯಗಳು ಅನ್ನೋದು ಕೆಲ ಮೂಲಗಳಿಂದ ತಿಳಿದು ಬಂದಿದೆ.