ನಮಾಮಿ ಗಂಗೆ ಯೋಜನೆ ವೇಳೆ ಸ್ಫೋಟ, 15 ಜನರ ಸಾವು

106

ಪ್ರಜಾಸ್ತ್ರ ಸುದ್ದಿ

ಡೆಹ್ರಾಡೊನ್: ನಮಾಮಿ ಗಂಗೆ ಯೋಜನೆಗೆ ಸಂಬಂಧಿಸದಂತೆ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿನ ಅಲಕನಂದಾ ನದಿ ತೀರಿದ ಹತ್ತಿರ ನಡೆದ ಕಾರ್ಯದ ವೇಳೆ, ಟ್ರಾನ್ಸ್ ಫಾರ್ಮರ್ ಸ್ಫೋಟಗೊಂಡು 15 ಜನರು ಮೃತಪಟ್ಟಿದ್ದಾರೆ.

ಘಟನೆಯಲ್ಲಿ ಅನೇಕರು ಗಾಯಗೊಂಡಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಗಾಯಾಳುಗಳನ್ನು ಚಮೋಲಿ ಆಸ್ಪತ್ರೆಗೆ ದಾಖಲಿಸಲಾಗಿದೆ. ರಕ್ಷಣಾ ತಂಡ ಹಾಗೂ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು ರಕ್ಷಣಾ ಕಾರ್ಯ ನಡೆಸಿದ್ದಾರೆ.

ಸತತವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಅಲಕಾನಂದ ನದಿಯ ನೀರಿನ ಮಟ್ಟ ಏರಿಕೆಯಾಗಿದೆ. ಅಲ್ಲದೇ ಪೌರಿ ಜಿಲ್ಲೆಯ ಶ್ರೀನಗರದಲ್ಲಿರುವ ಜೆವಿಕೆ ಜಲವಿದ್ಯುತ್ ಡ್ಯಾಂನಿಂದ ನೀರನ್ನು ಸಹ ಹೊರ ಬಿಡಲಾಗಿದೆ.




Leave a Reply

Your email address will not be published. Required fields are marked *

error: Content is protected !!