ಮುಂದುವರೆದ ಸಾಮೂಹಿಕ ನಮಾಜ್, ಭೋಜನ

287

ಕೆ.ಆರ್ ಪೇಟೆ: ಲಾಕ್ ಡೌನ್ ಇರುವುದ್ರಿಂದ 144 ಸೆಕ್ಷನ್ ಜಾರಿಯಲ್ಲಿದೆ. ಈ ವೇಳೆ ಇಡೀ ದೇಶ್ಯಾದ್ಯಂತ ಎಲ್ಲ ಧಾರ್ಮಿಕ ಕಾರ್ಯಕ್ರಮ, ಸಾಮೂಹಿಕ ಪ್ರಾರ್ಥನೆಗೆ ನಿಷೇಧ ಹೇರಲಾಗಿದೆ. ಆದ್ರೆ, ಮಂಡ್ಯ ಜಿಲ್ಲೆ ಕೆ.ಆರ್ ಪೇಟೆ ಪಟ್ಟಣ ಸೇರಿದಂತೆ ತಾಲೂಕಿನ ವಿವಿಧ ಕಡೆ ಸಾಮೂಹಿಕ ನಮಾಜ್ ಹಾಗೂ ಭೋಜನದ ವ್ಯವಸ್ಥೆ ಮಾಡಲಾಗ್ತಿದೆ.

ಕರೋನಾ ಹರಡುತ್ತಿರುವ ಹಿನ್ನೆಲೆಯಲ್ಲಿ ಸಾಮೂಹಿಕವಾಗಿ ಜನ ಸೇರುವುದಕ್ಕೆ, ಪ್ರಾರ್ಥನೆ ಸಲ್ಲಿಸುವುದಕ್ಕೆ ನಿಷೇಧವಿದೆ. ಆದ್ರೆ, ಕೆ.ಆರ್ ಪೇಟೆಗೆ ಹಾಸನ, ಮೈಸೂರು, ಹುಣಸೂರು ಸೇರಿದಂತೆ ವಿವಿಧಕಡೆಯಿಂದ ಅಕ್ರಮವಾಗಿ ಪ್ರವೇಶಿಸಿ ಮನೆಯಲ್ಲಿ ಸಾಮೂಹಿಕ ನಮಾಜ್ ಮಾಡ್ತಿರುವುದು ಕಂಡು ಬಂದ ಹಿನ್ನೆಲೆಯಲ್ಲಿ ಅವರನ್ನ ಅಲ್ಲಿಂದ ಜಾಗ ಖಾಲಿ ಮಾಡಿಸಲಾಗಿದೆ.

ಇನ್ನು ಹೀಗೆ ಅಕ್ರಮವಾಗಿ ಬರುತ್ತಿರುವವರ ವಿರುದ್ಧ, ಸಾಮೂಹಿಕವಾಗಿ ಪ್ರಾರ್ಥನೆ ಮಾಡುತ್ತಿರುವವರ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳದೆ ಇರೋದಕ್ಕೆ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಪ್ರಶ್ನೆ ಮಾಡಿದ್ರೆ ಪೊಲೀಸ್ರು, ಕರ್ತವ್ಯಕ್ಕೆ ಅಡ್ಡಿಯೆಂದು ನಮ್ಮ ವಿರುದ್ಧವೇ ಪ್ರಕರಣ ದಾಖಲು ಮಾಡ್ತಿದ್ದಾರೆ ಎಂದು ಸ್ಥಳೀಯರು ಆರೋಪಿಸಿದ್ದು, ಈ ಬಗ್ಗೆ ಮೇಲಾಧಿಕಾರಿಗಳು ಸರಿಯಾದ ಕ್ರಮ ತೆಗೆದುಕೊಳ್ಳಬೇಕಿದೆ.




Leave a Reply

Your email address will not be published. Required fields are marked *

error: Content is protected !!