ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಮಂಡ್ಯದಲ್ಲಿ ಶುಕ್ರವಾರ ಮೆಗಾ ಡೇರಿ ಉದ್ಘಾಟನೆ ಮಾಡಿ ಮಾತನಾಡಿದ ಕೇಂದ್ರ ಸಹಕಾರ ಸಚಿವ ಅಮಿತ್ ಶಾ, ಕರ್ನಾಟಕದ ಬ್ರ್ಯಾಂಡ್ ನಂದಿನಿ ಹಾಲಿನ ಉತ್ಪನ್ನಗಳ ಸಂಸ್ಥೆಯನ್ನು ಗುಜರಾತಿನ ಅಮುಲ್ ಜೊತೆಗೆ ಸೇರಿಸಿದರೆ ಇನ್ನು ಹೆಚ್ಚಿನ ಲಾಭ ಪಡೆಯಬಹುದು ಎಂದಿದ್ದರು. ಇದಕ್ಕೆ ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ಟ್ರೋಲ್ ಮಾಡಲಾಗುತ್ತಿದೆ.
ನಂದಿನಿ ನಮ್ಮ ಕರ್ನಾಟಕದ ಹೆಮ್ಮೆಯ ಬ್ರ್ಯಾಂಡ್. ಇದನ್ನು ಗುಜರಾತಿಗಳ ಪಾಲಾಗದಂತೆ ತಡೆಯಿರಿ ಸೇರಿದಂತೆ ಹಲವು ರೀತಿಯಲ್ಲಿ ಟ್ರೋಲ್ ಮಾಡುವ ಮೂಲಕ ಅಮಿತ್ ಶಾ ಹೇಳಿಕೆಯನ್ನು ಖಂಡಿಸಲಾಗುತ್ತಿದೆ.