ನಂದಿನಿ ಹಾಲಿನ ಪ್ಯಾಕೇಟ್ ಮೇಲೆ ಕನ್ನಡ ಮಾಯ

457

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ರಾಜ್ಯದ ಪ್ರತಿಷ್ಠಿತ ನಂದಿನಿ ಹಾಲಿನ ಪ್ಯಾಕೇಟ್ ಮೇಲೆ ಕನ್ನಡವನ್ನೇ ತೆಗೆದು ಹಾಕಲಾಗಿದೆ. ಹಿಂದಿ ಹಾಗೂ ಇಂಗ್ಲಿಷ್ ನಲ್ಲಿ ಮುದ್ರಿಸಲಾಗಿದೆ. ಇದು ಕನ್ನಡಿಗರ ಆಕ್ರೋಶ ಕಾರಣವಾಗಿದೆ. ಪ್ರತಿಯೊಂದು ವಿಚಾರದಲ್ಲಿ ರಾಜ್ಯ ಸರ್ಕಾರ ಹಿಂದಿ ಹೇರಿಕೆ ಮಾಡುತ್ತಿರುವುದು ಎಷ್ಟು ಸರಿ ಎಂದು ಕಿಡಿ ಕಾರಲಾಗಿದೆ.

ತ್ರಿಭಾಷಾ ನೀತಿಯನ್ನು ಪಾಲಿಸುತ್ತಿಲ್ಲ. ಸರ್ಕಾರಕ್ಕೆ ಮುಂದೆ ನಿಂತು ಕನ್ನಡವನ್ನು ಕೊಲೆ ಮಾಡುತ್ತಿದೆ. ದಿವಂಗತ ಪುನೀತ್ ರಾಜಕುಮಾರ್ ರಾಯಭಾರಿ ಆಗಿದ್ದ ವೇಳೆ ಕನ್ನಡದಲ್ಲಿಯೇ ಮುದ್ರಣಗೊಳ್ಳುತ್ತಿದ್ದ ಮಾಹಿತಿ ಇದೀಗ ಹಿಂದಿ ಹಾಗೂ ಇಂಗ್ಲಿಷ್ ನಲ್ಲಿದೆ. ಕೂಡಲೇ ಸರ್ಕಾರ ಹಿಂದಿ ಹೇರಿಕೆಯನ್ನು ನಿಲ್ಲಿಸಬೇಕೆಂದು ಕನ್ನಡಪರ ಸಂಘಟನೆಗಳು ಮುಖಂಡರು ಎಚ್ಚರಿಕೆ ನೀಡಿದ್ದಾರೆ.




Leave a Reply

Your email address will not be published. Required fields are marked *

error: Content is protected !!