ಯಾದಗಿರಿ: ಸುರಪುರ ತಾಲೂಕಿನ ನಾರಾಯಣಪುರ ಎಂಬಲ್ಲಿ ಕೃಷ್ಣಾ ನದಿಗೆ ಅಡ್ಡಲಾಗಿ ಕಟ್ಟಿರುವ ನಾರಾಣಪುರ ಡ್ಯಾಂನಿಂದ ರಾತ್ರೋರಾತ್ರಿ 3.25 ಲಕ್ಷ ಕ್ಯೂಸೆಕ್ ನೀರನ್ನ ಕೃಷ್ಣಾ ನದಿಗೆ ಹರಿಸಲಾಗಿದೆ. ಮಹಾರಾಷ್ಟ್ರದಲ್ಲಿ ಮತ್ತೆ ಮಳೆಯ ಆರ್ಭಟ ಶುರುವಾಗಿದ್ದು, 3.25 ಲಕ್ಷ ಕ್ಯೂಸೆಕ್ ನೀರು ನದಿಗೆ ಬಿಡಲಾಗಿದೆ.
ಇಷ್ಟೊಂದು ಪ್ರಮಾಣದಲ್ಲಿ ನೀರು ಹರಿಸಿರುವುದ್ರಿಂದ ಕೊಳ್ಳೂರು ಸೇತುವೆ, ಲಿಂಗಸೂರಿನ ಶೀತಹಳ್ಳಿ ಸೇತುವೆ, ದೇವದುರ್ಗದ ಹೂವಿನ ಹೆಡಗಿ ಸೇತುವೆ ಮುಳುಗಡೆಯಾಗಿವೆ. ಅಲ್ದೇ, ಯಾದಗಿರಿ, ರಾಯಚೂರಿನ ಕೃಷ್ಣಾ ನದಿ ಪಾತ್ರದ ಗ್ರಾಮಗಳಿಗೆ ಕಟ್ಟೆಚ್ಚರಿಕೆ ನೀಡಲಾಗಿದೆ.
ಕೃಷ್ಣಾ ನದಿಗೆ ಅಡ್ಡಲಾಗಿ ಕಟ್ಟಿರುವ ಈ ಜಲಾಶಯ ರಾಜ್ಯದ ಮೂರನೇ ದೊಡ್ಡ ಜಲಾಶಯವಾಗಿದೆ. ವಿಜಯಪುರ, ಕಲಬುರಗಿ, ಯಾದಗಿರಿ ಹಾಗೂ ರಾಯಚೂರು ಜಿಲ್ಲೆಗಳ ನೀರಾವರಿ ಉದ್ದೇಶಕ್ಕಾಗಿ ಇದನ್ನ ನಿರ್ಮಿಸಲಾಗಿದೆ. ಇದಕ್ಕೆ ಬಸವಸಾಗರ ಜಲಾಶಯ ಅಂತಾನೂ ಕರೆಯಲಾಗುತ್ತೆ.