ಪ್ರಜಾಸ್ತ್ರ ಸುದ್ದಿ
ತಿಪಟೂರು: ನಗರದಲ್ಲಿ ಎಬಿವಿಪಿ ವತಿಯಿಂದ ನಡೆದ ತಿರಂಗ ಯಾತ್ರೆಯಲ್ಲಿ ಶಿಕ್ಷಣ ಸಚಿವರು ಮಾಡಿದ ಯಡವಟ್ಟಿನ ವಿರುದ್ಧ ಎಲ್ಲೆಡೆ ಆಕ್ರೋಶ ವ್ಯಕ್ತವಾಗುತ್ತಿದೆ. ರಾಷ್ಟ್ರಧ್ವಜಕ್ಕಿಂತ ಎತ್ತರದಲ್ಲಿ ಎಬಿವಿಪಿ ಧ್ವಜ ಹಿಡಿದಿದ್ದಾರೆ. ಇದು ಎಲ್ಲೆರ ಕೆಂಗಣ್ಣಿಗೆ ಗುರಿಯಾಗಿದೆ.
ತಿರಂಗಯಾತ್ರೆಯಲ್ಲಿ ವಿದ್ಯಾರ್ಥಿಗಳು, ಶಿಕ್ಷಕರು ಸೇರಿ ಇತರರು ಭಾಗವಹಿಸಿದ್ದರು. ಈ ವೇಳೆ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಅವರು ತಿರಂಗ ಹಾಗೂ ಎಬಿವಿಪಿ ಧ್ವಜ ಒಟ್ಟಿಗೆ ಹಿಡಿದಿದ್ದು, ಇದರಲ್ಲಿ ತ್ರಿವರ್ಣಧ್ವಜಕ್ಕಿಂತ ಎತ್ತರದಲ್ಲಿ ಎಬಿವಿಪಿ ಧ್ವಜ ಹಿಡಿದಿದ್ದಾರೆ. ಈ ಸಂಬಂಧ ಯುವ ಕಾಂಗ್ರೆಸ್ ಘಟಕ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದೆ.