ಭಗವಾಧ್ವಜ ರಾಷ್ಟ್ರಧ್ವಜ ಆಗಬಹುದು: ಈಶ್ವರಪ್ಪ

218

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಹಿಜಾಬ್ ಹಾಗೂ ಕೇಸರಿ ಶಾಲು ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿರುವ ಸಚಿವ ಕೆ.ಎಸ್ ಈಶ್ವರಪ್ಪ, ಭಗವಾಧ್ವಜ ಮುಂದೊಂದು ದಿನ ರಾಷ್ಟ್ರಧ್ವಜವಾಗಬಹುದು ಎಂದು ವಿವಾದಾತ್ಮಕ ಹೇಳಿಕೆ ಕೊಟ್ಟಿದ್ದಾರೆ. ಈ ಮೂಲಕ ಉರಿಯುವ ಬೆಂಕಿಗೆ ಮತ್ತಷ್ಟು ತುಪ್ಪು ಸುರಿಯುವ ಕೆಲಸ ಮಾಡಿದ್ದಾರೆ.

ಶಿವಮೊಗ್ಗದಲ್ಲಿ ಸಚಿವರ ಪುತ್ರ ಕೇಸರಿ ಶಾಲು ಹಂಚಿದ್ದಾರೆ. ಸೂರತ್ ನಲ್ಲಿ 50 ಲಕ್ಷ ಶಾಲು ಖರೀದಿಗೆ ಆರ್ಡರ್ ಮಾಡಿದ್ದಾರೆ ಅನ್ನೋ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಈಶ್ವರಪ್ಪ, ರಾಷ್ಟ್ರಧ್ವಜವನ್ನೇ ಬದಲಿಸುವ ಮಾತುಗಳನ್ನಾಡಿದ್ದಾರೆ.




Leave a Reply

Your email address will not be published. Required fields are marked *

error: Content is protected !!