ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಸಂಯುಕ್ತ ಕಿಸಾನ್ ಮೋರ್ಚಾದ ಭಾಗವಾಗಿ ನವೆಂಬರ್ 26ರಂದು ರಾಜ್ಯದಲ್ಲಿ ಹೆದ್ದಾರಿ ಬಂದ್ ಗೆ ಕರೆ ಕೊಡಲಾಗಿದೆ. ಹೀಗಾಗಿ ನಾಳೆ ವಿವಿಧ ರೈತ ಸಂಘಟನೆಗಳಿಂದ ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಿ ಹೋರಾಟ ಮಾಡಲಾಗುತ್ತೆ.
ಬೆಂಗಳೂರು, ತುಮಕೂರು, ಚಾಮರಾಜನಗರ, ರಾಮನಗರ, ದಾವಣಗೆರೆ, ಮಂಡ್ಯ, ಚಿಕ್ಕಬಳ್ಳಾಪುರ, ಶಿವಮೊಗ್ಗ, ಕೊಡಗು, ಹಾಸನ ವಿಜಯನಗರ, ರಾಯಚೂರು, ಯಾದಗಿರಿ, ವಿಜಯಪುರ, ಕಲಬುರಗಿ, ಬೆಳಗಾವಿ, ಧಾರವಾಡ ಸೇರಿದಂತೆ ಎಲ್ಲೆ ಜಿಲ್ಲೆ ಹಾಗೂ ತಾಲೂಕುಗಳಲ್ಲಿ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿ ತಡೆ ಪ್ರತಿಭಟನೆ ನಡೆಸಲಾಗುತ್ತಿದೆ.