ಪ್ರಜಾಸ್ತ್ರ ಅಪರಾಧ ಸುದ್ದಿ
ಜೈಪುರ: ರಾಜಸ್ಥಾನ ವಿಧಾನಸಭೆ ಚುನಾವಣೆ ಫಲಿತಾಂಶ ಬಂದು ಎರಡು ದಿನಗಳು ಕಳೆಯುವಷ್ಟರಲ್ಲಿ ರಾಜಕೀಯ ನಾಯಕನ ಹತ್ಯೆಯಾಗಿದೆ. ರಾಷ್ಟ್ರೀಯ ರಜಪೂತ ಕರ್ಣಿ ಸೇನೆಯ ಅಧ್ಯಕ್ಷ ಸುಖದೇವ್ ಸಿಂಗ್ ಗೊಗಮೆಡಿ ಅವರನ್ನು ಕೊಲೆ ಮಾಡಲಾಗಿದೆ.
ಶ್ಯಾಮ್ ನಗರದಲ್ಲಿ ಮಂಗಳವಾರ ಮಧ್ಯಾಹ್ನ ಈ ಕೃತ್ಯವೆಸಗಲಾಗಿದೆ. ಸುಖದೇವ್ ಮನೆಗೆ ನುಗ್ಗಿದ ನಾಲ್ವರು ಗುಂಡಿನ ದಾಳಿ ನಡೆಸಿದ್ದಾರೆ. ತೀವ್ರ ಗಾಯಗೊಂಡಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ, ಅದಾಗಲೇ ಮೃತಪಟ್ಟಿದ್ದರು ಎಂದು ವೈದ್ಯರು ತಿಳಿಸಿದ್ದಾರೆ.
ಮನೆಯಲ್ಲಿ ಮಾತನಾಡುತ್ತ ಕುಳಿತಂತೆ ನಟಿಸಿದ ದುಷ್ಕರ್ಮಿಗಳು ಗುಂಡಿನ ಸುರಿಮಳೆ ಸುರಿಸುತ್ತಾರೆ. ಘಟನೆಯಲ್ಲಿ ಇಬ್ಬರು ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದಾರೆ. ಈ ಕುರಿತು ಪೊಲೀಸ್ ತನಿಖೆ ನಡೆಸಲಾಗುತ್ತಿದೆ.