ಹುಬ್ಬಳ್ಳಿಗೆ ಪ್ರಧಾನಿ: ಹೇಗಿದೆ ಭದ್ರತೆ?

234

ಪ್ರಜಾಸ್ತ್ರ ಸುದ್ದಿ

ಹುಬ್ಬಳ್ಳಿ: ಸ್ವಾಮಿ ವಿವೇಕಾನಂದರ ಜನ್ಮ ದಿನದ ನಿಮಿತ್ತ ಜನವರಿ 12ರಂದು ಆಚರಿಸುವ ಯುವ ಜನೋತ್ಸವ ಕಾರ್ಯಕ್ರಮ ಈ ಬಾರಿ ಹುಬ್ಬಳ್ಳಿಯಲ್ಲಿ ನಡೆಯುತ್ತಿದೆ. ಇಂದು ಸಂಜೆ ಉದ್ಘಾಟನೆಗೊಳ್ಳಲಿರುವ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಭಾಗವಹಿಸುತ್ತಿದ್ದಾರೆ. ಹೀಗಾಗಿ ಸಾಕಷ್ಟು ತಯಾರಿ ಮಾಡಿಕೊಳ್ಳಲಾಗಿದೆ.

ಪ್ರಧಾನಿ ಭದ್ರತೆ ಹಿನ್ನೆಲೆಯಲ್ಲಿ 7 ಜನ ಎಸ್ಪಿ ದರ್ಜೆಯ ಅಧಿಕಾರಿಗಳು, 25 ಡಿವೈಎಸ್ಪಿಗಳು, 60 ಪಿಐ, 18 ಕೆಎಸ್ಆರ್ ಪಿ, ಗರುಡಾ, ಸಿಎಆರ್, ಡಿಎಆರ್ ಸಿಬ್ಬಂದಿ ನೇಮಕ ಮಾಡಲಾಗಿದೆ. ಇನ್ನು ಸುಗಮ ಸಂಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಟ್ರಾಫಿಕ್ ಸಿಬ್ಬಂದಿ ನೇಮಕ ಮಾಡಲಾಗಿದೆ.

ಜನರಿಗೆ ಯಾವುದೇ ರೀತಿಯಿಂದ ಸಂಚಾರಕ್ಕೆ ತೊಂದರೆಯಾಗದಂತೆ ಪರ್ಯಾಯ ಮಾರ್ಗಗಳ ವ್ಯವಸ್ಥೆ ಮಾಡಲಾಗಿದೆ. ಯಾವುದೇ ಅಹಿತರಕ ಘಟನೆಗಳು ನಡೆಯದಂತೆ ಸಕಲ ರೀತಿಯಿಂದ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದು ಎಡಿಜಿಪಿ ಅಲೋಕ್ ಕುಮಾರ್ ಅವರು ಹೇಳಿದ್ದಾರೆ.




Leave a Reply

Your email address will not be published. Required fields are marked *

error: Content is protected !!