ಪ್ರಜಾಸ್ತ್ರ ಸುದ್ದಿ
ಬೆಳಗಾವಿ: ನೇಗಿನಾಳ ಮಠದ ಬಸವ ಸಿದ್ದಲಿಂಗ ಸ್ವಾಮೀಜಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಇಬ್ಬರು ಮಹಿಳೆಯರ ಪತ್ತೆಗಾಗಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ವಿವಿಧ ಮಠಾಧೀಶರು ಲೈಂಗಿಕ ದೌರ್ಜನ್ಯದಲ್ಲಿ ತೊಡಗಿದ್ದಾರೆ ಎಂದು ಇಬ್ಬರು ಮಹಿಳೆಯರು ಫೋನ್ ನಲ್ಲಿ ಮಾತನಾಡಿದ್ದರು. ಅದು ಎಲ್ಲೆಡೆ ವೈರಲ್ ಆಗಿತ್ತು.
ಆ ಅಪರಿಚಿತ ಮಹಿಳೆಯರು ಮಾತನಾಡಿದ್ದೇ ಸ್ವಾಮೀಜಿಗಳ ಸಾವಿಗೆ ಕಾರಣ ಎನ್ನಲಾಗುತ್ತಿದೆ. ಹೀಗಾಗಿ ಸೋಮಪ್ಪ ಈರಪ್ಪ ಬಾಗೇವಾಡಿ ಎಂಬುವರು ದೂರಿನ ಮೇರೆಗೆ ಮಹಿಳೆಯರ ಹುಡುಕಾಟ ನಡೆದಿದೆ. ಬೈಲಹೊಂಗಲ ಪೊಲೀಸ್ ಠಾಣೆ ಪೊಲೀಸರು ಈ ಬಗ್ಗೆ ತಿಳಿಸಿದ್ದಾರೆ.