ನೇಹಾ ಹತ್ಯೆ ಕೇಸ್: ಸ್ವಾಮೀಜಿಗಳ ಪ್ರತಿಭಟನೆ

85

ಪ್ರಜಾಸ್ತ್ರ ಸುದ್ದಿ

ಹುಬ್ಬಳ್ಳಿ: ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆಯನ್ನು ಖಂಡಿಸಿ ವಿವಿಧ ಮಠಗಳ ಸ್ವಾಮೀಜಿಗಳು ಶನಿವಾರ ಪ್ರತಿಭಟನೆ ನಡೆಸಿದರು. ಫಕೀರ ದಿಂಗಾಲೇಶ್ವರ ಸ್ವಾಮೀಜಿ ನೇತೃತ್ವದಲ್ಲಿ ವಿವಿಧ ಮಠಾಧೀಶರ ಕೂಡಿಕೊಂಡು ಪ್ರತಿಭಟನೆ ನಡೆಸಿದರು.

ಬಹುಸಂಖ್ಯಾತ ರಾಜಕಾರಣಿಗಳು ಇದನ್ನು ತಮ್ಮ ಸ್ವಾರ್ಥಕ್ಕೆ ಬಳಿಸಿಕೊಳ್ಳುತ್ತಿದ್ದಾರೆ. ಇದರ ಹಿಂದೆ ಯಾರಿದ್ದಾರೆ ಎನ್ನುವುದರ ತನಿಖೆಯಾಗಬೇಕು ಎಂದು ದಿಂಗಾಲೇಶ್ವರ ಸ್ವಾಮೀಜಿ ಆಗ್ರಹಿಸಿದ್ದಾರೆ. ಇಂತಹ ಪ್ರಕರಣಗಳಲ್ಲಿ ಶೀಘ್ರ ಶಿಕ್ಷೆಯಾಗುವ ಕಾನೂನು ಆಗಬೇಕು.

ಸರ್ಕಾರ ಈ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಳ್ಳಬೇಕು. ಒಂದು ಪಕ್ಷದವರು ಲವ್ ಜಿಹಾದ್ ಅಂತಾರೆ. ಮತ್ತೊಂದು ಪಕ್ಷದವರು ವೈಯಕ್ತ ಅಂತಾರೆ. ಹೇಳಿಕೆ ನೀಡುವ ಮನೆಯ ಮಕ್ಕಳಾಗಿದ್ದರೆ ಏನಾಗುತ್ತಿತ್ತು ಎಂದು ಆಕ್ರೋಶ ವ್ಯಕ್ತಪಡಿಸಿದರು.

ಧಾರವಾಡ ಮುರುಘಾಮಠದ ಸ್ವಾಮೀಜಿ, ಸಿಗ್ಗಾವಿಯ ಸಂಗನ ಬಸವ ಸ್ವಾಮೀಜಿ, ಸವಣೂರಿನ ಚನ್ನಬಸವ ಸ್ವಾಮೀಜಿ, ಕುಂದುಗೋಳದ ಬಸವಣ್ಣಜ್ಜ ಸೇರಿದಂತೆ ಹಲವು ಮಠಾಧೀಶರು ಈ ವೇಳೆ ಭಾಗವಹಿಸಿದ್ದರು.




Leave a Reply

Your email address will not be published. Required fields are marked *

error: Content is protected !!