ಬ್ರೇಕಿಂಗ್ ನ್ಯೂಸ್
Search

ನಾಳೆ ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ

77

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಹುಬ್ಬಳಿಯ ವಿದ್ಯಾರ್ಥಿನಿ ನೇಹಾ ಹತ್ಯೆ ಖಂಡಿಸಿ ನಾಳೆ ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ ನಡೆಸಲಾಗುವುದು ಎಂದು ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಹೇಳಿದ್ದಾರೆ. ಈ ಬಗ್ಗೆ ಅವರು ಸಾಮಾಜಿಕ ಜಾಲತಾಣ ಎಕ್ಸ್, ಫೇಸ್ ಬುಕ್ ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

ಚುನಾವಣೆ ಗಡಿಬಿಡಿಯಲ್ಲಿ ನಾವು ಹೆಣ್ಮಕ್ಕಳ ಮೇಲಿನ ಕ್ರೌರ್ಯ, ದೈವ ನಿಂದನೆ ಹಾಗೂ ರಾಷ್ಟ್ರ ಭಕ್ತರ ಮೇಲಿನ ಹಲ್ಲೆ ಪ್ರಕರಣಗಳನ್ನು ನಿರ್ಲಕ್ಷಿಸಿ ಕೂರಲಾಗದು. ಹುಬ್ಬಳ್ಳಿಯ ನೇಹಾ ಹಿರೇಮಠ ಹತ್ಯೆ ಅತ್ಯಂತ ಅಮಾನುಷ ಘಟನೆ. ಇದನ್ನು ಪೊಲೀಸರು ಎಲ್ಲ ಮಗ್ಗಲುಗಳಿಂದಲೂ ತನಿಖೆ ನಡೆಸಬೇಕಾಗಿರುವುದು ಸಾರ್ವಜನಿಕರ ಆಗ್ರಹವಾಗಿದೆ.

ಚುನಾವಣಾ ಕಾರ್ಯವನ್ನು ಬದಿಗಿರಿಸಿ ಏಪ್ರಿಲ್ 22, ಸೋಮವಾರದಂದು ನಮ್ಮ ಮುಖಂಡರು, ಕಾರ್ಯಕರ್ತರು ರಾಜ್ಯಾದ್ಯಂತ ಬೀದಿಗಿಳಿದು ಹೋರಾಟ ನಡೆಸಲು ಕರೆ ನೀಡಲಾಗಿದೆ ಎಂದು ಬರೆದಿದ್ದಾರೆ.




Leave a Reply

Your email address will not be published. Required fields are marked *

error: Content is protected !!