ಪ್ರಜಾಸ್ತ್ರ ಸುದ್ದಿ
ದೊಡ್ಡಬಳ್ಳಾಪುರ: ಮನೆ ಕಟ್ಟುವ ವಿಚಾರಕ್ಕೆ ದೊಡ್ಡ ಗಲಾಟೆಯೊಂದು ನಡೆದಿದೆ. ಗಲಾಟೆಯ ಪರಿಣಾಮ ವ್ಯಕ್ತಿಯೊಬ್ಬನ ಕೈ ಬೆರಳು ಕತ್ತರಿಸುವ ಮಟ್ಟಕ್ಕೆ ಹೋದ ಘಟನೆ ತಾಲೂಕಿನ ಮರಳೇನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಅಂಬರೀಶ್ ಎಂಬಾತ ಹಲ್ಲೆಗೊಳಗಾಗಿದ್ದಾನೆ. ಬೆಂಗಳೂರಿನ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ. ತಿಮ್ಮರಾಜು ಹಾಗೂ ಆತನ ಕುಟುಂಬಸ್ಥರು ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿದ್ದು, ಈ ಸಂಬಂಧ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.