ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ರಾಜಕೀಯ ಪಕ್ಷಗಳು ಇತರೆ ಪಕ್ಷಗಳ ಮುಖಂಡರನ್ನು, ಸದಸ್ಯರನ್ನು, ಕಾರ್ಯಕರ್ತರನ್ನು ತಮ್ಮತ್ತ ಸೆಳೆಯುತ್ತಿದ್ದಾರೆ. ಇಂದು ನೆಲಮಂಗಲ ನಗರಸಭೆಯ ಅಧ್ಯಕ್ಷೆ ಸೇರಿ ಜೆಡಿಎಸ್ ನ 10 ಸದಸ್ಯರು ಕೈ ಹಿಡಿದಿದ್ದಾರೆ.
ಸದಾಶಿವನಗರದಲ್ಲಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರ ನಿವಾಸದಲ್ಲಿ ಪರಿಷತ್ ಮಾಜಿ ಸದಸ್ಯ ಬೆಮೆಲ್ ಕಾಂತರಾಜು, ಕಾಂಗ್ರೆಸ್ ಮುಖಂಡ ಎನ್.ಶ್ರೀನಿವಾಸ್ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಸೇರ್ಪಡೆಯಾದರು.
ನೆಲಮಂಗಲ ನಗರಸಭೆಯಲ್ಲಿ 14 ಜೆಡಿಎಸ್ ಸದಸ್ಯರಿದ್ದು, ಈಗ 11 ಸದಸ್ಯರು ಸಾಮೂಹಿಕವಾಗಿ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಇದರಲ್ಲಿ ಜೆಡಿಎಸ್ ಹಾಲಿ ಅಧ್ಯಕ್ಷ ಲತಾ ಹೇಮಂತಕುಮಾರ್ ಸಹ ಇದ್ದಾರೆ.