ಪ್ರಜಾಸ್ತ್ರ ಸುದ್ದಿ
ಶಿರಸಿ: ಉತ್ತರ ಕನ್ನಡ ಜಿಲ್ಲೆಯನ್ನ ವಿಭಜಿಸಿ ಶಿರಸಿಯನ್ನ ನೂತನ ಜಿಲ್ಲೆಯನ್ನಾಗಿ ಮಾಡಬೇಕೆಂದು ಆಗ್ರಹಿಸಿ ಬಂದ್ ಮಾಡಲಾಗಿದೆ. ಶಿರಸಿ ಜಿಲ್ಲಾ ಹೋರಾಟ ಸಮಿತಿ ವತಿಯಿಂದ ಬುಧವಾರ ನಗರ ಬಂದ್ ಮಾಡಲಾಗಿದ್ದು, ಅಂಗಡಿ ಮುಂಗಟ್ಟುಗಳನ್ನ ಮುಚ್ಚಿ ವ್ಯಾಪಾರಿಗಳು ಸ್ಪಂದನೆ ವ್ಯಕ್ತಪಡಿಸಿದ್ದಾರೆ.
ವಿವಿಧ ತಾಲೂಕುಗಳಿಂದ ಆಗಮಿಸಿದ ಹೋರಾಟಗಾರರು ನಗರದ ಹಳೆ ಬಸ್ ನಿಲ್ದಾಣದ ವೃತ್ತದಲ್ಲಿ ಜಮಾಯಿಸಿ ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಮಾತ್ನಾಡಿರುವ ಮಾಜಿ ಶಾಸಕ ವಿವೇಕಾನಂದ ವೈದ್ಯ, ಪ್ರತ್ಯೇಕ ಜಿಲ್ಲೆ ರಚನೆ ಅನಿವಾರ್ಯವಾಗಿದೆ ಎಂದಿದ್ದಾರೆ.