ಬಾಗಲಕೋಟೆ: ಪ್ರವಾಹದಿಂದ ತತ್ತರಿಸಿರುವ ಬಾಗಲಕೋಟೆ ಜಿಲ್ಲೆಗೆ ನೂತನ ಸಚಿವ ಕೆ.ಎಸ್ ಈಶ್ವರಪ್ಪ ಇಂದು ಭೇಟಿ ನೀಡ್ತಿದ್ದಾರೆ. ನೆರೆ ಪರಿಹಾರದ ಕಾರ್ಯದ ಬಗ್ಗೆ ಅಧಿಕಾರಿಗಳ ಜೊತೆ ಸಭೆ ನಡೆಸಲಿದ್ದಾರೆ. ಹೀಗಾಗಿ ಇಂದು ಮಧ್ಯಾಹ್ನ 12 ಗಂಟೆಗೆ ಬಾಗಲಕೋಟೆಗೆ ಭೇಟಿ ನೀಡಲಿದ್ದಾರೆ.
ಬಾಗಲಕೋಟೆ ಭೇಟಿ ಬಳಿಕ ವಿಜಯಪುರಕ್ಕೆ ಮಧ್ಯಾಹ್ನ 3 ಗಂಟೆಗೆ ಬರಲಿದ್ದಾರೆ. ಪ್ರವಾಹ ಪೀಡಿತ ಪ್ರದೇಶಗಳಿಗೆ ತೆರಳಿ ಅಲ್ಲಿನ ಪರಿಸ್ಥಿತಿ ಬಗ್ಗೆ ತಿಳಿದುಕೊಂಡು ಪರಿಹಾರ ಕಾರ್ಯದ ಬಗ್ಗೆ ಗಮನ ಹರಿಸುವಂತೆ ನೂತನ ಸಚಿವರಿಗೆ ಸಿಎಂ ಸೂಚನೆ ನೀಡಿದ್ದಾರೆ. ಹೀಗಾಗಿ ಕೆ.ಎಸ್ ಈಶ್ವರಪ್ಪ ಇಂದು ಈ ಎರಡು ಜಿಲ್ಲೆಗಳಿಗೆ ಭೇಟಿ ನೀಡ್ತಿದ್ದಾರೆ.