ಅವರ ಸರ್ಕಾರ ಕೆಡವಲು ನಾನ್ಯಾರು?: ಆರ್.ಅಶೋಕ್

127

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಇನ್ನೆರಡು ದಿನಗಳಲ್ಲಿ ಕೋರ್ ಕಮಿಟಿ ಸಭೆ ಕರೆಯಲಾಗುವುದು ಎಂದು ನೂತನ ವಿಪಕ್ಷ ನಾಯಕನಾಗಿ ಆಯ್ಕೆಯಾಗಿರುವ ಆರ್.ಅಶೋಕ್ ಹೇಳಿದ್ದಾರೆ. ಮಾಜಿ ಸಿಎಂ ಬೊಮ್ಮಾಯಿ ಅವರನ್ನು ಭೇಟಿಯಾಗಿ ಒಂದು ಗಂಟೆಗೂ ಹೆಚ್ಚು ಕಾಲ ಚರ್ಚೆ ನಡೆಸಿದರು.

ನಂತರ ಮಾತನಾಡಿದ ಅವರು, ಬೆಳಗಾವಿ ಅಧಿವೇಶನದಲ್ಲಿ ಏನು ಚರ್ಚಿಸಬೇಕು, ನಮ್ಮ ನಿಲುವು ಏನು, ಲೋಕಸಭೆ ಚುನಾವಣೆ ವಿಚಾರ ಕುರಿತು ಚರ್ಚೆ ನಡೆಸಿದ್ದೇವೆ. ಅಧಿವೇಶನದಲ್ಲಿ ಚರ್ಚಿಸುವ ವಿಚಾರ ಕುರಿತು ಪಕ್ಷದ ನಾಯಕರೊಂದಿಗೆ ಸಭೆ ನಡೆಸಲಾಗುವುದು ಎಂದರು.

ಅವರ ಸರ್ಕಾರ ಕೆಡವಲು ನಾನ್ಯಾರು? ಹಿಂದೆ ಅವರ ಸರ್ಕಾರ ಹೇಗೆ ಬಿದ್ದು ಹೋಯಿತು ಅನ್ನೋದು ಅವರಿಗೆ ಗೊತ್ತಿದೆ. ಪಕ್ಕದ ಮನೆಯಲ್ಲಿರುವ ಡಿ.ಕೆ ಶಿವಕುಮಾರ್ ಅವರನ್ನು ದೂರವಿಟ್ಟು ಸಚಿವ ಪರಮೇಶ್ವರ್ ಅವರು ತಮ್ಮ ಮನೆಯಲ್ಲಿ ಸಭೆ ಯಾಕೆ ಮಾಡಿದರು ಎಂದು ಪ್ರಶ್ನಿಸಿದರು. ಜಮೀರ್ ಹೇಳಿಕೆ ಕುರಿತು ಅಧಿವೇಶನದಲ್ಲಿ ಮಾತನಾಡುತ್ತೇವೆ. ಅವರ ಸಂವಿಧಾನ ವಿರೋಧಿ ನಡೆಯನ್ನು ಖಂಡಿಸುತ್ತೇವೆ ಅಂತಾ ಹೇಳಿದರು.




Leave a Reply

Your email address will not be published. Required fields are marked *

error: Content is protected !!