ನಾಳೆ ನೂತನ ರಾಷ್ಟ್ರಪತಿ ಪ್ರಮಾಣ ವಚನ

325

ಪ್ರಜಾಸ್ತ್ರ ಸುದ್ದಿ

ನವದೆಹಲಿ: ಭಾರತದ 15ನೇ ರಾಷ್ಟ್ರಪತಿಯಾಗಿ ಆಯ್ಕೆ ಆಗಿರುವ ದ್ರೌಪದಿ ಮುರ್ಮು ಅವರು ಸೋಮವಾರ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಸಂಸತ್ತಿನ ಸೆಂಟ್ರಲ್ ಹಾಲ್ ನಲ್ಲಿ ಬೆಳಗ್ಗೆ ನಡೆಯುವ ಕಾರ್ಯಕ್ರಮದಲ್ಲಿ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ವಿ.ರಮಣ್ ಅವರು ಪ್ರಮಾಣ ವಚನ ಬೋಧಿಸಲಿದ್ದಾರೆ.

ಪ್ರಮಾಣ ವಚನಕ್ಕೂ ಪೂರ್ವದಲ್ಲಿ ಸೇನಾ ಸಿಬ್ಬಂದಿ 21 ಬಾರಿ ಕುಶಾಲ ತೋಪು ಸಿಡಿಸಲಿದ್ದಾರೆ. ನಂತರ ಮೆರವಣಿಗೆ ಮೂಲಕ ನಿರ್ಗಮಿತ ರಾಷ್ಟ್ರಪತಿ ಹಾಗೂ ನೂತನ ರಾಷ್ಟ್ರಪತಿ ಅವರು ಸಂಸತ್ತಿಗೆ ಆಗಮಿಸುತ್ತಾರೆ. ಪ್ರಮಾಣ ವಚನದ ನಂತರ ರಾಷ್ಟ್ರಪತಿ ಭವನಕ್ಕೆ ತೆರಳುತ್ತಾರೆ. ಅಲ್ಲಿ ಸೇನಾ ಪಡೆಗಳಿಂದ ಗೌರವ ಸಲ್ಲಿಸಲಾಗುತ್ತೆ.

ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು, ಪ್ರಧಾನಿ ಮೋದಿ, ಲೋಕಸಭಾ ಸ್ಪೀಕರ್ ಓಂ ಬಿರ್ಲಾ, ಕೇಂದ್ರ ಸಚಿವರು, ರಾಜ್ಯಪಾಲರು, ಮುಖ್ಯಮಂತ್ರಿಗಳು, ಸಂಸದರು, ರಾಜತಾಂತ್ರಿಕ ಕಾರ್ಯಗಳ ಮುಖ್ಯಸ್ಥರು, ಸೇನಾ ಪಡೆಯ ಅಧಿಕಾರಿಗಳು ಭಾಗವಹಿಸುತ್ತಾರೆ.




Leave a Reply

Your email address will not be published. Required fields are marked *

error: Content is protected !!