ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಬುಧವಾರ ಸಂಜೆ ರಾಷ್ಟ್ರಪತಿ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ 43 ಜನ ಸಂಸದರು ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಇದರಲ್ಲಿ ಕರ್ನಾಟಕದ ನಾಲ್ವರು ಸಂಸದರಿದ್ದಾರೆ. ಇದೀಗ ಎಲ್ಲ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ.
ಶೋಭಾ ಕರಂದ್ಲಾಜೆಗೆ ಕೃಷಿ ಮತ್ತು ರೈತರ ಅಭಿವೃದ್ಧಿ ಖಾತೆ, ಭಗವಂತ ಖೂಬಾಗೆ ಹೊಸ ಮತ್ತು ನವೀಕರಿಸಬಹುದಾದ ಇಂಧನ ಮತ್ತು ರಸಗೊಬ್ಬರ ಖಾತೆ ನೀಡಲಾಗಿದೆ. ಎ.ನಾರಾಯಣಸ್ವಾಮಿಗೆ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಹಾಗೂ ರಾಜ್ಯಸಭಾ ಸದಸ್ಯ ರಾಜೀವ ಚಂದ್ರಶೇಖರಗೆ ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯಮಶೀಲತೆ, ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಖಾತೆ ನೀಡಲಾಗಿದೆ.
ಹುಬ್ಬಳ್ಳಿ-ಧಾರವಾಡ ಸಂಸದ ಪ್ರಲ್ಹಾದ ಜೋಶಿ, ಸಂಸದೀಯ ವ್ಯವಹಾರ, ಕಲ್ಲಿದ್ದಲು ಮತ್ತು ಗಣಿ ಖಾತೆ ನಿರ್ವಹಿಸ್ತಿದ್ದಾರೆ. ಕರ್ನಾಟಕದಿಂದ ರಾಜ್ಯಸಭೆಗೆ ಆಯ್ಕೆಯಾದ ಇನ್ನೊಬ್ಬ ಸದಸ್ಯೆಯಾದ ನಿರ್ಮಲಾ ಸೀತಾರಾಮನ್, ಹಣಕಾಸು ಮತ್ತು ಕಾರ್ಪೂರೇಟ್ ವ್ಯವಹಾರಗಳ ಖಾತೆ ನೋಡಿಕೊಳ್ಳುತ್ತಿದ್ದಾರೆ.