ಊರಿಗೆ ಹೊಸಬರ ಆಗಮನ: ಸರ್ವೇ ಕಾರ್ಯಕ್ಕೆ ಚಾಲನೆ

504

ಮಂಡ್ಯ: ಸಂತೇಬಾಚಹಳ್ಳಿ ಹೋಬಳಿಯ ಭಾರತೀಪುರ ಗ್ರಾಮದಲ್ಲಿ ಮುಂಬೈ ಸೇರಿದಂತೆ ಹೊರ ರಾಜ್ಯ ಹಾಗೂ ಹೊರ ಜಿಲ್ಲೆಗಳಿಂದ ಆಗಮಿಸಿರುವ ವ್ಯಕ್ತಿಗಳ ಪತ್ತೆ ಹಾಗೂ ಸರ್ವೇ ಕಾರ್ಯಕ್ಕೆ ಚಾಲನೆ ನೀಡಲಾಯ್ತು.

ಸಮಾಜಸೇವಕ ಭಾರತೀಪುರ ಪುಟ್ಟಣ್ಣ ನೇತೃತ್ವದಲ್ಲಿ ಸರ್ವೇ ಕಾರ್ಯಕ್ಕೆ ಚಾಲನೆ ನೀಡಲಾಯಿತು. ಬೇರೆ ಊರುಗಳಿಂದ ಬಂದಿರುವ ಪರಿಚಿತ ಹಾಗೂ ಅಪರಿಚಿತ ವ್ಯಕ್ತಿಗಳ ಸರ್ವೇ ಕಾರ್ಯಕ್ಕೆ ಆಗಮಿಸಿದ ಶಿಕ್ಷಕರಿಗೆ ಮಾಸ್ಕ್ ಹಾಗೂ ಸ್ಯಾನಿಟೈಸರ್ ವಿತರಿಸಲಾಯ್ತು.

ಮುಂಬೈ ಸೇರಿದಂತೆ ಹೊರ ರಾಜ್ಯಗಳಿಂದ ಗ್ರಾಮಕ್ಕೆ ಅಕ್ರಮವಾಗಿ ಬಂದಿರುವ ವ್ಯಕ್ತಿಗಳ ಸರ್ವೇ ಕಾರ್ಯ ಮಾಡಲು ಆಗಮಿಸಿರುವ ಶಿಕ್ಷಕರಿಗೆ ಅಥವ ಆರೋಗ್ಯ ಕಾರ್ಯಕರ್ತರಿಗೆ ಮಾಹಿತಿ ನೀಡಬೇಕು ಎಂದು ಪುಟ್ಟಣ್ಣ ಕೈಮುಗಿದು ಮನವಿ ಮಾಡಿದರು. ಈ ಸಂದರ್ಭದಲ್ಲಿ ಭಾರತೀಪುರ ಗ್ರಾಮದ ಮುಖಂಡರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.




Leave a Reply

Your email address will not be published. Required fields are marked *

error: Content is protected !!