ಬೆಂಗಳೂರು: ರಾಜ್ಯದ ಹಲವು ಸುದ್ದಿ ವಾಹಿನಿಗಳಲ್ಲಿ ನಿರೂಪಕರಾಗಿ ಕಾರ್ಯನಿರ್ವಹಿಸಿದ್ದ ಪತ್ರಕರ್ತ ಗಜಾನನ ಹೆಗಡೆ ನಿಧನರಾಗಿದ್ದಾರೆ. ಕೆಲದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಇಂದು ನಿಧನರಾಗಿದ್ದಾರೆ.
ಈಟಿವಿ, ಕಸ್ತೂರಿ ಟಿವಿ, ಪ್ರಜಾ ಟಿವಿ ಹಾಗೂ ಜಿ ಟಿವಿಯಲ್ಲಿ ನಿರೂಪಕರಾಗಿ ಸೇವೆ ಸಲ್ಲಿಸಿದ್ದಾರೆ. ಅನೇಕ ಕಾಲೇಜುಗಳಲ್ಲಿ ದೃಶ್ಯ ಮಾಧ್ಯಮದ ಬಗ್ಗೆ ವಿಶೇಷ ಉಪನ್ಯಾಸ ನೀಡಿದ್ರು. ಟಿವಿ ಮೀಡಿಯಾ ಬಗ್ಗೆ ಕರ್ನಾಟಕ ವಿಶ್ವವಿದ್ಯಾಲಯದ ಪತ್ರಿಕೋದ್ಯಮದ ವಿದ್ಯಾರ್ಥಿಗಳಿಗೆ ವಿಶೇಷ ಉಪನ್ಯಾಸ ನೀಡಿದ್ರು ಎಂದು ನಿವೃತ್ತ ಪ್ರಾಧ್ಯಾಪಕರಾದ ಎ.ಎಸ್ ಬಾಲಸುಬ್ರಹ್ಮಣ್ಯ ಅವರು ನೆನಪು ಮಾಡಿಕೊಂಡಿದ್ದಾರೆ.
ಪಾರ್ಥಿವ ಶರೀರವನ್ನ ಕಿಮ್ಸ್ ಆಸ್ಪತ್ರೆಯಲ್ಲಿ ಇರಿಸಲಾಗಿದೆ. ಪತ್ರಕರ್ತ ಗಜಾನನ ಹೆಗಡೆ ನಿಧನಕ್ಕೆ ಕರ್ನಾಟಕ ವಿಶ್ವವಿದ್ಯಾಲದ ಪತ್ರಿಕೋದ್ಯಮ ವಿಭಾಗದ ಸದಸ್ಯರು ಸೇರಿದಂತೆ ಅವರೊಂದಿಗೆ ಕೆಲಸ ಮಾಡಿದ ಸಹದ್ಯೋಗಿಗಳು ಸಂತಾಪ ಸೂಚಿಸಿದ್ದಾರೆ.