ಪ್ರಜಾಸ್ತ್ರ ಸುದ್ದಿ
ಚಿತ್ರದುರ್ಗ: ಖಾಸಗಿ ಸುದ್ದಿ ವಾಹಿನಿಯ ಕ್ಯಾಮೆರಾಮನ್ ವಿನಯ ತೀವ್ರ ಉಸಿರಾಟದ ತೊಂದರೆಯಿಂದ ಸಾವನ್ನಪ್ಪಿದ್ದಾರೆ. 34 ವರ್ಷದ ವಿನಯ ಕೇವಲ 10 ದಿನಗಳ ಹಿಂದೆಯಷ್ಟೇ ಮದುವೆಯಾಗಿದ್ರು. ವಿನಯ ಸಾವು ಎರಡೂ ಕುಟುಂಬಸ್ಥರಲ್ಲಿ ಬರಸಿಡಿಲು ಬಡಿದಂತಾಗಿದೆ.
ಕಳೆದ ರಾತ್ರಿ ಉಸಿರಾಟದ ಸಮಸ್ಯೆ ಕಾಣಿಸಿಕೊಂಡ ಪರಿಣಾಮ ನಗರದ ಶ್ರೀ ಬಸವೇಶ್ವರ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ತಡರಾತ್ರಿ ದಾವಣಗೆರೆಯ ಸಿಟಿ ಸೆಂಟ್ರಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ, ಚಿಕಿತ್ಸೆ ಫಲಿಸದೆ ಬಧುವಾರ ನಸುಕಿನ ಜಾವ ನಿಧನರಾಗಿದ್ದಾರೆ.
ವಿನಯ ನಿಧನಕ್ಕೆ ಪತ್ರಕರ್ತರು, ಅಧಿಕಾರಿಗಳು, ರಾಜಕಾರಣಿಗಳು ಕಂಬನಿ ಮಿಡಿದಿದ್ದಾರೆ. ಮಧ್ಯಾಹ್ನ ಸ್ವಗ್ರಾಮ ಅನ್ನೇಹಾಳದಲ್ಲಿ ಅಂತ್ಯಕ್ರಿಯೆ ನಡೆಯಲಿದೆ.