ರಾಜ್ಯದಲ್ಲಿ 4 ದಿನ ಮಳೆ.. ಮುಂಗಾರು ಆಗಮನದ ನಿರೀಕ್ಷೆ

218

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಬುಧವಾರ ಸಂಜೆ ರಾಜ್ಯದ ಬಹುತೇಕ ಕಡೆ ಭರ್ಜರಿ ಮಳೆಯಾಗಿದೆ. ಇದು ಗುರುವಾರ, ಶುಕ್ರವಾರ ಸೇರಿದಂತೆ ಮುಂದಿನ 4 ದಿನಗಳ ಕಾಲ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಹೀಗಾಗಿ 17 ಜಿಲ್ಲೆಗಳಲ್ಲಿ ಹಳದಿ ಅಲರ್ಟ್ ಘೋಷಿಸಲಾಗಿದೆ.

ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ತೀವ್ರವಾಗಿರುವುದ್ರಿಂದ ರಾಜ್ಯದಲ್ಲಿ ಮಳೆಯಾಗ್ತಿದೆ. ಜೂನ್ 6 ಅಥವ 7ರಂದು ಕರ್ನಾಟಕಕ್ಕೆ ಮುಂಗಾರು ಪ್ರವೇಶವಾಗಲಿದೆಯಂತೆ. ರಾಜ್ಯದ ತುಂಬಾ ಮುಂದಿನ 4 ದಿನಗಳ ಕಾಲ ಭರ್ಜರಿ ಮಳೆಯಾಗಲಿದೆ. ಹೀಗಾಗಿ ಕರಾವಳಿ ಭಾಗದ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.




Leave a Reply

Your email address will not be published. Required fields are marked *

error: Content is protected !!