ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಓಮಿಕ್ರಾನ್ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಇಂದಿನಿಂದ ಮುಂದಿನ 10 ದಿನಗಳ ಕಾಲ ರಾಜ್ಯದಲ್ಲಿ ನೈಟ್ ಕರ್ಫ್ಯೂ ಜಾರಿ ಮಾಡಲಾಗಿದೆ. ಈ ಕುರಿತು ಕಟ್ಟುನಿಟ್ಟಿನ ಕ್ರಮಗಳನ್ನು ತೆಗೆದುಕೊಳ್ಳಲು ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ.
ಹೊಸ ವರ್ಷಾಚರಣೆಗೆ ಸಂಬಂಧಿಸಿದಂತೆ ಸಾಕಷ್ಟು ಕಟ್ಟುನಿಟ್ಟಿನ ಕ್ರಮಗಳನ್ನು ತೆಗೆದುಕೊಳ್ಳಲು ಸರ್ಕಾರ ಮುಂದಾಗಿದೆ. ಹೀಗಾಗಿ ಬಾರ್, ಪಬ್, ರೆಸ್ಟೋರೆಂಟ್ ಗಳಿಗೆ ಮಾರ್ಗಸೂಚಿಗಳನ್ನು ನೀಡಲಾಗಿದೆ. ರಾತ್ರಿ ಸಂಚಾರ ಸೇವೆಗೆ ಸಂಬಂಧಿಸಿದಂತೆಯೂ ಒಂದಿಷ್ಟು ನಿಬಂಧನೆಗಳನ್ನು ವಿಧಿಸಲಾಗಿದೆ. ಇದನ್ನು ಉಲ್ಲಂಘನೆ ಮಾಡುವವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ತಿಳಿಸಲಾಗಿದೆ.
ಇನ್ನು ನೈಟ್ ಕರ್ಫ್ಯೂ ಬಗ್ಗೆ ವಿಪಕ್ಷಗಳು ಸೇರಿದಂತೆ ಜನ ಸಾಮಾನ್ಯರು ಸಹ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ಹಗಲು ಹೊತ್ತಿನಲ್ಲಿ ರಾಜಕೀಯ ದೊಡ್ಡ ದೊಡ್ಡ ರ್ಯಾಲಿಗಳು, ಸಭೆ ಸಮಾರಂಭಗಳು ಸೇರಿದಂತೆ ಎಲ್ಲವೂ ಜನಸಂದಣಿಯಿಂದ ಕೂಡಿರುವಾಗ ರಾತ್ರಿ ಬಂದ್ ಅನ್ನೋದರಿಂದ ಏನೂ ಸಾಧ್ಯವಿಲ್ಲವೆಂದು ಹೇಳುತ್ತಿದ್ದಾರೆ.