ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ರಾಜ್ಯದಲ್ಲಿ ಮುಂಗಾರು ತಡವಾದ ಪರಿಣಾಮ ಜನರು ಪರಿತಪಿಸುತ್ತಿದ್ದಾರೆ. ಇದರ ನಡವೆ ಶುಕ್ರವಾರ ಎಲ್ಲೆಡೆ ಒಂದಿಷ್ಟು ಮಳೆಯಾಗಿದೆ. ಹೀಗಾಗಿ ಜನರಲ್ಲಿ ಒಂದಿಷ್ಟು ಮಂದಹಾಸ ಮೂಡಿದ್ದು, ಮುಂದಿನ ನಾಲ್ಕು ದಿನಗಳ ಕಾಲ ಭರ್ಜರಿ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿದು ಬಂದಿದೆ.
ಕರಾವಳಿ, ಮಲೆನಾಡು, ಉತ್ತರ ಒಳನಾಡು, ದಕ್ಷಿಣ ಒಳನಾಡು ಸೇರಿದಂತೆ ಬೆಂಗಳೂರು, ಮಂಗಳೂರು, ಮೈಸೂರು, ಶಿವಮೊಗ್ಗ, ಕಲಬುರಗಿ, ಕೊಡಗು, ಚಿಕ್ಕಮಗಳೂರು ಕಡೆ ವ್ಯಾಪಕ ಮಳೆಯ ಮನ್ಸೂಚನೆ ನೀಡಲಾಗಿದೆ. ಜೂನ್ 24ರಿಂದ 26ರ ತನಕ ಭಾರೀ ಮಳೆ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದ್ದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ.