ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ರಾಜ್ಯದಲ್ಲಿ ಈಗಾಗ್ಲೇ ಮಳೆಯ ಆರ್ಭಟ ಜೋರಾಗಿದೆ. ಕೆಲವು ಜಿಲ್ಲೆಗಳ ಜನರು ಮಳೆಯಿಂದ ಸಂಕಷ್ಟಕ್ಕೆ ಸಿಲುಕಿದ್ದಾರೆ. ಇದರ ನಡುವೆ ಇನ್ನೂ ನಾಲ್ಕು ದಿನಗಳ ಕಾಲ ಮಳೆ ಮುಂದುವರೆಯಲಿದೆ ಎಂದು ತಿಳಿದು ಬಂದಿದೆ. ಉತ್ತರ ಒಳನಾಡಿನಲ್ಲಿ ಸೆಪ್ಟೆಂಬರ್ 16 ರಿಂದ 20ರ ತನಕ ಭರ್ಜರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಇದಲ್ಲದೆ ಕಲಬುರಗಿ, ರಾಯಚೂರು, ಬೀದರ, ಯಾದಗಿರಿ, ವಿಜಯಪುರ ಭಾಗಗಳಲ್ಲಿ ಭರ್ಜರಿ ಮಳೆಯಾಗುವ ಸಾಧ್ಯತೆಯಿದೆ. ಅದೆ ರೀತಿ ಮಲೆನಾಡಿನ ಭಾಗಗಳಲ್ಲಿಯೂ ಮಳೆಯಾಗಲಿದೆ. ಕೊಡಗು, ಹಾಸನ, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆಯಂತೆ.