ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಮುಂದಿನ ಐದು ದಿನಗಳ ಕಾಲ ಕರ್ನಾಟಕ, ಪಶ್ಚಿಮ ಬಂಗಾಳ, ಸಿಕ್ಕಿಂನಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈಶಾನ್ಯ ಭಾಗದಲ್ಲಿ ನೈರುತ್ಯ ಮುಂಗಾರು ವೇಗ ಪಡೆದುಕೊಂಡ ಪರಿಣಾಮ ಮಳೆಯಾಗಲಿದೆ.
ಕರ್ನಾಟಕ, ಕೇರಳ, ತೆಲಂಗಾಣದಲ್ಲಿ ಉತ್ತಮ ಮಳೆಯಾಗಲಿದೆ. ದಕ್ಷಿಣ ಒಳನಾಡು, ಉತ್ತರ ಒಳನಾಡಿನಲ್ಲಿಯೂ ಮಳೆ ಕಾಣಿಸಿಕೊಳ್ಳಲಿದೆ. ಹೀಗಾಗಿ ದೇಶದ ಬಹುತೇಕ ರಾಜ್ಯಗಳಲ್ಲಿ ವರುಣನ ಆರ್ಭಟವಾಗಲಿದೆ ಎಂದು ಎಚ್ಚರಿಸಲಾಗಿದೆ.