ಪ್ರಜಾಸ್ತ್ರ ಸುದ್ದಿ
ತುಮಕೂರು: ಕರೋನಾದಿಂದಾಗಿ 2019-20ರ ಶೈಕ್ಷಣಿಕ ವರ್ಷದ ಮೇಲೆ ಸಾಕಷ್ಟು ಪರಿಣಾಮ ಬೀರಿದೆ. ಇದೀಗ ಕೋವಿಡ್ 2ನೇ ಅಲೆ ಎದ್ದಿರುವ ಪರಿಣಾಮ, 2021-22ರ ಶೈಣಿಕ ವರ್ಷಕ್ಕೆ ಸಂಬಂಧಿಸಿದಂತೆ ಶಿಕ್ಷಣ ಸಚಿವರು ಮಾಹಿತಿ ನೀಡಿದ್ದಾರೆ.
ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಮಾತ್ನಾಡಿದ ಅವರು, ಜುಲೈ 15, 2021ರಿಂದ ಮುಂದಿನ ಶೈಕ್ಷಣಿಕ ವರ್ಷ ಶುರು ಮಾಡುವ ಚಿಂತನೆ ನಡೆದಿದೆ ಎಂದಿದ್ದಾರೆ. ಕೋವಿಡ್ ಭೀತಿಯ ನಡುವೆಯೂ ಶೈಕ್ಷಣಿಕ ವರ್ಷ ಪ್ರಾರಂಭಿಸುವ ಪರಿಸ್ಥಿತಿ ಇದೆ. ಇನ್ನು 1-5ನೇ ತರಗತಿ ಮಕ್ಕಳ ಕ್ಲಾಸ್ ನಡೆಸುವಂತಿಲ್ಲ. ಒಂದು ವೇಳೆ ನಡೆಸಿದರೆ ಅಂತವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ಎಂದಿದ್ದಾರೆ.