2023ರ ಚುನಾವಣೆ ಕೊನೆಯದು: ಸಿದ್ದರಾಮಯ್ಯ

376

ಪ್ರಜಾಸ್ತ್ರ ಸುದ್ದಿ

ಮೈಸೂರು: ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಚುನಾವಣೆ ರಾಜಕೀಯಕ್ಕೆ ಗುಡ್ ಬೈ ಹೇಳುವ ಕುರಿತು ಮಾತನಾಡಿದ್ದಾರೆ. 2023ರ ಚುನಾವಣೆ ಕೊನೆಯದು ಎಂದಿದ್ದಾರೆ. ರಾಜಕೀಯದಲ್ಲಿ ಸಕ್ರಿಯವಾಗಿರುತ್ತೇನೆ. ಆದರೆ, ಚುನಾವಣೆಯಲ್ಲಿ ಸ್ಪರ್ಧಿಸಲ್ಲ ಎಂದಿದ್ದಾರೆ.

ಐದು ಬಾರಿ ಚಾಮುಂಡೇಶ್ವರಿ ಕ್ಷೇತ್ರದ ಜನರು ನನ್ನನ್ನು ಗೆಲ್ಲಿಸಿದ್ದಾರೆ. ನಾನು ಅವರನ್ನು ಎಂದಿಗೂ ಮರೆಯಲ್ಲ. ವರುಣ, ಚಾಮುಂಡೇಶ್ವರಿ, ಹುಣಸೂರು, ಕೋಲಾರ, ಬಾದಾಮಿ, ಚಾಮರಾಜಪೇಟೆ, ಹೆಬ್ಬಾಳದಿಂದ ಸ್ಪರ್ಧಿಸಲು ಜನ ಆಹ್ವಾನಿಸಿದ್ದಾರೆ. ಆದರೆ, ಇದರ ಬಗ್ಗೆ ತೀರ್ಮಾನ ಇನ್ನು ತೆಗೆದುಕೊಂಡಿಲ್ಲ ಎಂದರು.




Leave a Reply

Your email address will not be published. Required fields are marked *

error: Content is protected !!