ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಡೆಡ್ಲಿ ಕರೋನಾ ಸಿಲಿಕಾನ್ ಸಿಟಿಯನ್ನ ಅಕ್ಷರಶಃ ಬೆಚ್ಚಿಬೀಳಿಸಿದೆ. ಪ್ರತಿನಿತ್ಯ 1 ಸಾವಿರ ಮೇಲೆ ಸೋಂಕು ಪ್ರಕರಣಗಳು ಪತ್ತೆಯಾಗ್ತಿವೆ. ಹೀಗಾಗಿ ರಾಜ್ಯ ಸರ್ಕಾರ ಒಂದು ವಾರಗಳ ಕಾಲ ನಗರವನ್ನ ಲಾಕ್ ಡೌನ್ ಮಾಡುವ ಚಿಂತನೆ ನಡೆಸಿದೆಯಂತೆ.
ಕೆಲ ಮೂಲಗಳ ಪ್ರಕಾರ ಮಂಗಳವಾರದಿಂದ ಒಂದು ವಾರ ಆದ್ರೆ, ಇನ್ನು ಕೆಲ ಮೂಲಗಳ ಪ್ರಕಾರ ಬುಧವಾರದಿಂದ ಒಂದು ವಾರ ಲಾಕ್ ಡೌನ್ ಎಂದು ಹೇಳಲಾಗ್ತಿದೆ. ಈ ಬಗ್ಗೆ ತಜ್ಞರು ಸಹ ಸಲಹೆ ನೀಡಿದ್ದಾರೆ ಎನ್ನಲಾಗ್ತಿದೆ. ಆದ್ರೆ, ಈ ಬಗ್ಗೆ ರಾಜ್ಯ ಸರ್ಕಾರದಿಂದ ಅಧಿಕೃತ ಘೋಷಣೆಯಾಗಿಲ್ಲ. ಸ್ವತಃ ಸಿಎಂ ಬಿ.ಎಸ್ ಯಡಿಯೂರಪ್ಪನವರು ಕ್ವಾರಂಟೈನ್ ನಲ್ಲಿದ್ದಾರೆ.
ಸಿಎಂ ಅಥವ ಸರ್ಕಾರದ ಪರವಾಗಿ ಸಂಬಂಧಿಸಿದ ಸಚಿವರು ಈ ಬಗ್ಗೆ ಸ್ಪಷ್ಟ ಪಡಿಸಬೇಕಿದೆ. ಈ ಬಗ್ಗೆ ಆದಷ್ಟು ಬೇಗ ತಿಳಿಯಲಿದೆ.