ಪ್ರಜಾಸ್ತ್ರ ಸುದ್ದಿ
ನವದೆಹಲಿ: ದೆಹಲಿಯಲ್ಲಿ ಏಪ್ರಿಲ್ 26, ಸೋಮವಾರದವರೆಗೆ ಲಾಕ್ ಡೌನ್ ಘೋಷಣೆ ಮಾಡಲಾಗಿತ್ತು. ಈಗ ಇದನ್ನ ಇನ್ನು ಒಂದು ವಾರ ಕಾಲ ವಿಸ್ತರಣೆ ಮಾಡಲಾಗಿದೆ. ಈ ಬಗ್ಗೆ ಸಿಎಂ ಅರವಿಂದ ಕೇಜ್ರಿವಾಲ್ ಆದೇಶ ಹೊರಡಿಸಿದ್ದಾರೆ.
ಈ ಬಗ್ಗೆ ಮಾತ್ನಾಡಿರುವ ಸಿಎಂ ಕೇಜ್ರಿವಾಲ್, ನಾನು ಲಾಕ್ ಡೌನ್ ವಿರೋಧಿಯಾಗಿದ್ದವನು. ತುಂಬಾ ಕಷ್ಟದಲ್ಲಿದ್ದೇವೆ. ಔಷಧಿ, ಬೆಡ್, ಆಕ್ಸಿಜನ್ ವ್ಯವಸ್ಥೆ ಮಾಡಲಾಗ್ತಿದೆ. ಈ ಬಗ್ಗೆ ಕೇಂದ್ರಕ್ಕೆ ಕೇಳಿದ್ದೇವೆ. ಲಾಕ್ ಡೌನ್ ನಿಂದ ಕರೋನಾ ಕಂಟ್ರೋಲ್ ಸಾಧ್ಯವಿಲ್ಲ. ಆದ್ರೆ, ಅದರ ಏರಿಕೆಯ ವೇಗ ಕಡಿಮೆ ಮಾಡಬಹುದು ಎಂದಿದ್ದಾರೆ.
ದೆಹಲಿಯಲ್ಲಿ ಕೋವಿಡ್ ಸೋಂಕಿತರ ಪ್ರಮಾಣ ದಿನದಿಂದ ದಿನಕ್ಕೆ ಹೆಚ್ಚಾಗ್ತಿದೆ. 93,080 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. 13,898 ಜನರು ಪ್ರಾಣ ಕಳೆದುಕೊಂಡಿದ್ದಾರೆ. ಪರಿಸ್ಥಿತಿ ತುಂಬಾ ಗಂಭೀರವಾಗಿರುವ ಪರಿಣಾಮ, ಮತ್ತೊಂದು ವಾರ ಲಾಕ್ ಡೌನ್ ವಿಸ್ತರಣೆ ಮಾಡಲಾಗಿದೆ.