ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಬಜೆಟ್ ನಲ್ಲಿ ಘೋಷಣೆ ಮಾಡಿರುವ ಯೋಜನೆಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಗಳು ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಸಭೆ ನಡೆಸಲಾಗುವುದು ಎಂದು ಸಿಎಂ ಬೊಮ್ಮಾಯಿ ತಿಳಿಸಿದ್ದಾರೆ.
ಕಳೆದ ವಾರವೇ ಸಭೆ ನಡೆಸಲಾಗಿತ್ತು. ಆದರೆ, ಅನಿವಾರ್ಯ ಕಾರಣಗಳಿಂದ ಮುಂದೂಡಲಾಗಿದೆ. ಪೂರ್ವ ನಿರ್ಧಾರಿತ ಸಭೆಯಾಗಿರುವುದರಿಂದ ಮುಂದಿನ ವಾರ ಸಭೆ ನಡೆಸಲಾಗಿದೆ. ಬಜೆಟ್ ನಲ್ಲಿ ಯಾವೆಲ್ಲ ಯೋಜನೆಗಳನ್ನು ಘೋಷಣೆ ಮಾಡಿದ್ದೇವೋ ಅವುಗಳನ್ನು ಪೂರ್ಣಗೊಳಿಸಲಾಗುವುದು. ಇದಕ್ಕಾಗಿ ಹಣಕಾಸು ಇಲಾಖೆಯಿಂದ ಅನುಮೋದನೆ ನೀಡಲಾಗುವುದು ಎಂದರು.
ಶೇಕಡ 80ರಷ್ಟು ಕಾರ್ಯಕ್ರಮಗಳು ಅನುಷ್ಠಾನ ಮಾಡಲು ಸೂಚಿಸಲಾಗಿದೆ. ಈಗಾಗ್ಲೇ ಅನುದಾನ ಬಿಡುಗಡೆ ಮಾಡಲಾಗಿದೆ. ಉಳಿದ 20ರಷ್ಟು ಕಾನೂನು ಹಾಗೂ ತಾಂತ್ರಿಕ ಕಾರಣಗಳಿಂದ ವಿಳಂಬವಾಗುತ್ತದೆ ಎಂದು ತಿಳಿಸಿದರು.