ಕರ್ನಾಟಕ ಸೇರಿ 8 ಕಡೆ ಪಿಎಫ್ಐ, ಎಸ್ ಡಿಪಿಐ ಕಾರ್ಯಕರ್ತರು ವಶಕ್ಕೆ

131

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಪಿಎಫ್ಐ ಹಾಗೂ ಎಸ್ ಡಿಪಿಐ ವಿರುದ್ಧ ರಾಷ್ಟ್ರೀಯ ತನಿಖಾ ಸಂಸ್ಥೆ ತನ್ನ ಕಾರ್ಯಾಚರಣೆ ಮುಂದುವರೆಸಿದೆ. ಮಂಗಳವಾರ ಕರ್ನಾಟಕ ಸೇರಿದಂತೆ ದೇಶದ 8 ಕಡೆ ದಾಳಿ ಮಾಡಿ ಕಾರ್ಯಕರ್ತರನ್ನು ವಶಕ್ಕೆ ಪಡೆದಿದೆ.

ರಾಜ್ಯದಲ್ಲಿ ಬಾಗಲಕೋಟೆ, ವಿಜಯಪುರ, ಕೊಪ್ಪಳ, ಬೀದರ, ಬಳ್ಳಾರಿ, ಚಿತ್ರದುರ್ಗ, ರಾಮನಗರ, ಮೈಸೂರು, ಬೆಂಗಳೂರು ಗ್ರಾಮಾಂತರ, ಕೋಲಾರದಲ್ಲಿ ದಾಳಿ ನಡೆಸಿ 40ಕ್ಕೂ ಹೆಚ್ಚು ಕಾರ್ಯಕರ್ತರನ್ನು ವಶಕ್ಕೆ ಪಡೆಯಲಾಗಿದೆ.

ಈ ಮೂಲಕ ಪಿಎಫ್ಐ, ಎಸ್ ಡಿಪಿಐ ಸಂಘಟನೆಯ ವಿರುದ್ಧ ಕೇಂದ್ರ ಸರ್ಕಾರ ದಾಳಿ ಮುಂದುವರೆಸಿದೆ. ಇದನ್ನು ಖಂಡಿಸಿ ಅನೇಕ ಕಡೆ ಪ್ರತಿಭಟನೆಗಳು ಸಹ ಮುಂದುವರೆದಿದ್ದು, ಹಿಂಸಾಚಾರ ಸಹ ನಡೆದಿವೆ.


TAG


Leave a Reply

Your email address will not be published. Required fields are marked *

error: Content is protected !!