ಪ್ರಜಾಸ್ತ್ರ ಸುದ್ದಿ
ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಭಾನುವಾರ ಮುಂಜಾನೆ ಎನ್ಐಎ ಅಧಿಕಾರಿಗಳು ದಾಳಿ ನಡೆಸಿದರು. ಉಗ್ರ ಚಟುವಟಿಕೆಗಳಲ್ಲಿ ಯುವಕರನ್ನು ಪ್ರೇರಿಪಿಸುತ್ತಿದ್ದ ಅನ್ನೋ ಹಿನ್ನೆಲೆಯಲ್ಲಿ ಅಬ್ದುಲ್ ಮುಕದೀರ್ ಎಂಬಾತನನ್ನು ವಶಕ್ಕೆ ಪಡೆಯಲಾಗಿದೆಯಂತೆ.
ದೆಹಲಿ ಹಾಗೂ ಬೆಂಗಳೂರಿನ ಅಧಿಕಾರಿಗಳ ತಂಡ ದಾಳಿ ನಡೆಸಿದೆ. ಉತ್ತರ ಕನ್ನಡ ಜಿಲ್ಲೆಯ ಪೊಲೀಸರ ಸಹಾಯದಿಂದ ಆರೋಪಿಯನ್ನು ವಶಕ್ಕೆ ಪಡೆಯಲಾಗಿದೆ ಎಂದು ತಿಳಿದು ಬಂದಿದೆ.