ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ನಿಗಮ, ಮಂಡಳಿ ಅಧ್ಯಕ್ಷರ ನೇಮಕ ವಿಚಾರ ಸಾಕಷ್ಟು ಕುತೂಹಲ ಮೂಡಿಸುತ್ತಿದೆ. ಈಗಾಗ್ಲೇ ಪಟ್ಟಿ ಫೈನಲ್ ಆಗಿದೆ ಎಂದು ಹೇಳಲಾಗುತ್ತಿದೆ. ಆದರೆ, ಬುಧವಾರ ಸಹ ಬಿಡುಗಡೆಯಾಗಿಲ್ಲ. ಈ ಬಗ್ಗೆ ಮಾತನಾಡಿರುವ ಡಿಸಿಎಂ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ಯಾವುದೇ ಕ್ಷಣದಲ್ಲಾದರೂ ನಿಗಮ, ಮಂಡಳಿ ಅಧ್ಯಕ್ಷರ ಪಟ್ಟಿ ಬಿಡುಗಡೆಯಾಗಬಹುದು ಎಂದಿದ್ದಾರೆ.
ನಿನ್ನೆಯೂ ಈ ಬಗ್ಗೆ ಹೇಳಿದ್ದೇನೆ. ಇವತ್ತೂ ಹೇಳುತ್ತಿದ್ದೇನೆ. ಯಾವುದೇ ಕ್ಷಣದಲ್ಲಾದರೂ ಪಟ್ಟಿ ಬಿಡುಗಡೆಯಾಗಬಹುದು. 36 ಶಾಸಕರು, 39 ಕಾರ್ಯಕರ್ತರ ಹೆಸರನ್ನು ಪ್ರಕಟಿಸಲಾಗುವುದು ಎಂದರು. ಇನ್ನು ಲೋಕಸಭೆ ಚುನಾವಣೆಯಲ್ಲಿ ಸಚಿವರು ಸ್ಪರ್ಧೆಗೆ ನಿರಾಕರಣೆ ಬಗ್ಗೆ ಮಾತನಾಡಿದ ಅವರು, ಹೈಕಮಾಂಡ್ ಏನು ಹೇಳುತ್ತೋ ಅದನ್ನು ನಾನು ಕೇಳಬೇಕು. ಸಚಿವರನ್ನು ಕೇಳಬೇಕು. ಹೀಗಾಗಿ ಎಲ್ಲರೂ ಪಕ್ಷ ಹೇಳಿದಂತೆ ಕೇಳಬೇಕು ಅಂತಾ ಹೇಳಿದರು.