ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ರಾಜ್ಯದ ವಿವಿಧ ನಿಗಮ ಮಂಡಳಿಗಳ ಅಧ್ಯಕ್ಷ ನೇಮಕ ಕೊನೆಯ ಹಂತಕ್ಕೆ ಬಂದಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ, ಇಂದು ಮುಂಜಾನೆ ಅಧ್ಯಕ್ಷರ ಪಟ್ಟಿಗೆ ಸಹಿ ಹಾಕಿದ್ದಾರೆ ಎಂದು ತಿಳಿದು ಬಂದಿದೆ.
37 ಶಾಸಕರು ಹಾಗೂ 37 ಕಾರ್ಯಕರ್ತರ ಹೆಸರು ಪಟ್ಟಿಯಲ್ಲಿವೆ. ಹೈಕಮಾಂಡ್ ಒಪ್ಪಿಗೆ ಮೇರೆಗೆ ರಾಜ್ಯಾಧ್ಯಕ್ಷರು ಇಂದು ಸಂಜೆ ಪಟ್ಟಿ ಬಿಡುಗಡೆ ಮಾಡುವ ಸಾಧ್ಯತೆಯಿದೆ. ಮೊದಲು 40 ರಿಂದ 46 ಮಂದಿಯ ಹೆಸರು ಪ್ರಕಟವಾಗಬಹುದು ಎನ್ನಲಾಗುತ್ತಿದೆ.