ಬೆಳಗ್ಗೆ ನೀಡಿದ್ದ ಅಧ್ಯಕ್ಷ ಸ್ಥಾನ ಸಂಜೆ ವಾಪಸ್

440

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಇಂದು ಬೆಳಗ್ಗೆ ಸಿಎಂ ಬಿ.ಎಸ್ ಯಡಿಯೂರಪ್ಪನವರು 24 ಜನ ಶಾಸಕರಿಗೆ ನಿಗಮ-ಮಂಡಳಿ ಅಧ್ಯಕ್ಷ ಸ್ಥಾನ ನೀಡಿದ್ರು. ಇದ್ರಿಂದಾಗಿ ಸರ್ಕಾರದಲ್ಲಿ ಆಂತರಿಕ ಭಿನ್ನಮತ ಸ್ಫೋಟಗೊಂಡಿದ್ದು, ಇದೀಗ 4 ಜನ ಶಾಸಕರಿಗೆ ನೀಡಿದ್ದ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ಹಿಂದಕ್ಕೆ ಪಡೆಯಲಾಗಿದೆ.

ಗಂಗಾವತಿ ಶಾಸಕ ಪರಣ್ಣ ಮುನವಳ್ಳಿ, ಕನಕಗಿರಿ ಶಾಸಕ ಬಸವರಾಜ ದಢೇಸೂರ, ಕಾಪು ಶಾಸಕ ಲಾಲಾಜಿ ಆರ್ ಮೆಂಡನ್, ಚಿತ್ರದುರ್ಗ ಶಾಸಕ ಜಿ.ಎಚ್ ತಿಪ್ಪಾರೆಡ್ಡಿ ಅವರಿಗೆ ನೀಡಿದ್ದ ನಿಗಮ ಮಂಡಳಿಯ ಅಧ್ಯಕ್ಷ ಸ್ಥಾನವನ್ನ ಹಿಂದಕ್ಕೆ ಪಡೆಯಲಾಗಿದೆ.

ಸಿಎಂ ಬಿ.ಎಸ್ ಯಡಿಯೂರಪ್ಪನವರು, ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ನೀಡಿ ಶಾಸಕರ ಅಸಮಾಧಾನ ಕಡಿಮೆ ಮಾಡಲು ನೋಡಿದ್ರು. ಆದ್ರೆ, ಇದಕ್ಕೂ ಕೆಲವರು ಮುನಿಸಿಕೊಂಡಿದ್ದಾರೆ. ಹೀಗಾಗಿ 4 ಶಾಸಕರಿಗೆ ನೀಡಿದ್ದ ಸ್ಥಾನವನ್ನ ವಾಪಸ್ ಪಡೆಯಲಾಗಿದೆ.




Leave a Reply

Your email address will not be published. Required fields are marked *

error: Content is protected !!