ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಕರೋನಾ ರೂಪಾಂತರವಾದ ಓಮಿಕ್ರಾನ್ ಹಿನ್ನೆಲೆಯಲ್ಲಿ ಇಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ಸಚಿವರು ಹಾಗೂ ಅಧಿಕಾರಿಗಳ ಸಭೆ ನಡೆಸಲಾಯಿತು. ಈ ವೇಳೆ ಕೆಲ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ.
ಹೊಸ ವರ್ಷದ ಸಂಭ್ರಮದ ವೇಳೆ ಓಮಿಕ್ರಾನ್ ಹೆಚ್ಚಾಗುವ ಹಿನ್ನೆಲೆಯಲ್ಲಿ ಡಿಸೆಂಬರ್ 28ರಿಂದ ಜನವರಿ 7ರ ತನಕ 10 ದಿನ ನೈಟ್ ಕರ್ಫ್ಯೂ ಜಾರಿ ಮಾಡಲಾಗಿದೆ. ಅಲ್ದೇ ಒಂದಿಷ್ಟು ಕಟ್ಟುನಿಟ್ಟಿನ ಕ್ರಮಗಳನ್ನು ತೆಗೆದುಕೊಳ್ಳಲು ಜಿಲ್ಲಾಧಿಕಾರಿಗಳಿಗೆ ತಿಳಿಸಲಾಗಿದೆ.
ಪಬ್, ರೆಸಾರ್ಟ್, ರೆಸ್ಟೋರೆಂಟ್, ಬಾರ್ ಗಳಲ್ಲಿ ಡಿಸೆಂಬರ್ 2ರ ತನಕ ಶೇಕಡ 50ರಷ್ಟು ಜನಕ್ಕೆ ಮಾತ್ರ ಅವಕಾಶ. ಇದರ ಜೊತೆಗೆ ಆರ್ ಟಿಪಿಎಸ್ ಕಡ್ಡಾಯವಾಗಿ ಮಾಡಬೇಕು ಎಂದು ಸೂಚಿಸಲಾಗಿದೆ. ಈ ಮೂಲಕ ಸಂಭ್ರಮದ ಹೊಸ ವರ್ಷಕ್ಕೆ ಬ್ರೇಕ್ ಹಾಕಲಾಗಿದೆ.