ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಕರೋನಾ ಇದೀಗ ಮತ್ತೊಂದು ರೂಪ ಪಡೆದುಕೊಂಡಿರುವುದ್ರಿಂದ ರಾಜ್ಯದಲ್ಲಿ ಮತ್ತೆ ನೈಟ್ ಕರ್ಫ್ಯೂ ಜಾರಿ ಮಾಡಲಾಗಿದೆ. ಡಿಸೆಂಬರ್ 23ರಿಂದ ಜನವರಿ 2ರ ತನಕ ರಾಜ್ಯದಲ್ಲಿ ನೈಟ್ ಕರ್ಫ್ಯೂ ಜಾರಿ ಮಾಡಲಾಗ್ತಿದೆ ಸಿಎಂ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ.
ರಾತ್ರಿ 10 ಗಂಟೆಯಿಂದ ಬೆಳಗ್ಗೆ 6ಗಂಟೆಯ ತನಕ ರಾಜ್ಯ ಸಂಪೂರ್ಣ ಬಂದ್ ಆಗಲಿದೆ. ಹೀಗಾಗಿ ಡಿಸೆಂಬರ್ 23ರಿಂದ ಮುಂದಿನ 10 ದಿನಗಳ ಕಾಲ ಕರ್ನಾಟಕ ರಾತ್ರಿ ಸಂಪೂರ್ಣವಾಗಿ ಬಂದ್ ಆಗಲಿದೆ. ಆ ವೇಳೆ ಯಾರು ಮನೆಯಿಂದ ಹೊರಬರದಂತೆ ಸೂಚಿಸಲಾಗ್ತಿದೆ.
ಈಗಾಗ್ಲೇ ವಿದೇಶಗಳಿಂದ ಬರುವವರನ್ನ ಸೂಕ್ತ ತಪಾಸಣೆ ನಡೆಸಿ ಕ್ವಾರಂಟೈನ್ ಮಾಡಲಾಗ್ತಿದೆ. ಮುಂಜಾಗ್ರತ ಕ್ರಮವಾಗಿ ರಾತ್ರಿ ಸಂಚಾರ ನಿಷೇಧ ಮಾಡಲಾಗ್ತಿದೆ. ಈ ಬಗ್ಗೆ ಇಂದು ಸಂಜೆಯೊಳಗೆ ಮಾರ್ಗಸೂಚಿಗಳನ್ನ ಬಿಡುಗಡೆ ಮಾಡಲಾಗುವುದು ಎಂದು ತಿಳಿಸಲಾಗಿದೆ. ಈ ಕ್ರಮಗಳನ್ನ ಅನುಸರಿಸಿಕೊಂಡು ಜನರು ಜಾಗೃತರಾಗಿರಬೇಕೆಂದು ಆರೋಗ್ಯ ಸಚಿವ ಡಾ.ಕೆ ಸುಧಾರಕ ಹೇಳಿದ್ದಾರೆ.