ಪ್ರಜಾಸ್ತ್ರ ಸುದ್ದಿ
ಮಂಡ್ಯ: ಜೆಡಿಎಸ್ ಹಾಗೂ ಬಿಜೆಪಿ ಮೈತ್ರಿ ಅಭ್ಯರ್ಥಿಯಾಗಿ ನಿಖಿಲ್ ಸ್ಪರ್ಧಿಸುವುದು ಬಹುತೇಕ ಖಚಿತ. ಮಾರ್ಚ್ 25ಕ್ಕೆ ಬಂದು ನಾನೇ ಅಧಿಕೃತವಾಗಿ ಘೋಷಣೆ ಮಾಡುತ್ತೇನೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ.
ಲೋಕಸಭಾ ಚುನಾವಣೆಯ ಪೂರ್ವಭಾವಿ ಸಭೆಯಲ್ಲಿ ಶುಕ್ರವಾರ ಮಾತನಾಡಿದ ಅವರು, ಮಾರ್ಚ್ 21ಕ್ಕೆ ನನಗೆ ಆಪರೇಷನ್ ಇದೆ. ಮಾರ್ಚ್ 25ಕ್ಕೆ ಬಂದು ಅಭ್ಯರ್ಥಿ ಹೆಸರು ಘೋಷಿಸುತ್ತೇನೆ. ನಿಖಿಲ್ ಒಪ್ಪಿಸುವ ಕೆಲಸ ಮಾಡುತ್ತೇನೆ. ನಿಮ್ಮ ಭಾವನೆಗಳಿಗೆ ಯಾವುದೇ ಕಾರಣಕ್ಕೂ ಧಕ್ಕೆ ತರುವುದಿಲ್ಲ ಎಂದರು.
ಹೆಚ್ಡಿಕೆ ಈ ಹೇಳಿಕೆ ನೋಡಿದರೆ ಸಂಸದೆ ಸುಮಲತಾ ಅಂಬರೀಶಗೆ ಬಿಜೆಪಿ ಕೈ ಬಿಡುವ ಸಾಧ್ಯತೆಗಳು ದಟ್ಟವಾಗಿವೆ. ಅವರೆಲ್ಲ ತುಂಬಾ ವಿಶ್ವಾಸದಿಂದ ಬಿಜೆಪಿ ಟಿಕೆಟ್ ನನಗೆ ಸಿಗುತ್ತೆ ಎನ್ನುತ್ತಿದ್ದಾರೆ. ಮಂಡ್ಯ ಬಿಟ್ಟು ಎಲ್ಲಿಯೂ ಹೋಗುವುದಿಲ್ಲ ಅಂತಾನೂ ಹೇಳುತ್ತಿದ್ದಾರೆ. ಒಂದು ವೇಳೆ ನಿಖಿಲ್ ಕುಮಾರಸ್ವಾಮಿಗೆ ಟಿಕೆಟ್ ಪಕ್ಕಾ ಆದರೆ ಸಂಸದೆ ಸುಮಲತಾ ಮುಂದಿನ ನಡೆ ಏನು ಅನ್ನೋ ಕುತೂಹಲವಿದೆ.