ಬಿಜೆಪಿ-ಜೆಡಿಎಸ್ ದೋಸ್ತಿ: ಬಿಎಸ್ವೈ ಭೇಟಿಯಾದ ನಿಖಿಲ್

304

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಬಿಜೆಪಿ ಹಾಗೂ ಜೆಡಿಎಸ್ ಇದೀಗ ಮೈತ್ರಿ ಮಾಡಿಕೊಂಡಿವೆ. ಮುಂಬರುವ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಎರಡು ಪಕ್ಷಗಳು ಒಟ್ಟಿಗೆ ಹೋಗಲು ತಯಾರಾಗಿದ್ದು, ಸೀಟು ಹೊಂದಾಣಿಕೆ ಬಾಕಿ ಉಳಿದಿದೆ. ಇದರ ಬೆನ್ನಲ್ಲೇ ಇಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ಬಿಜೆಪಿ ಮಾಜಿ ಸಿಎಂ ಯಡಿಯೂರಪ್ಪನವರನ್ನು ಭೇಟಿಯಾದರು.

ಈ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ನಿಖಿಲ್, ಎಲ್ಲರಿಗೂ ತಿಳಿದಿರುವಂತೆ ನಾವು ಎನ್ ಡಿಎ ಭಾಗವಾಗಿದ್ದೇವೆ. ಯಡಿಯೂರಪ್ಪನವರು ರಾಜ್ಯದ ಹಿರಿಯ ನಾಯಕರು. ಅವರ ಆಶೀರ್ವಾದ ಪಡೆಯಲು ಬಂದಿದ್ದೇನೆ ಎಂದರು.

ಜೆಡಿಎಸ್ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ, ನಿಖಿಲ್ ಕುಮಾರಸ್ವಾಮಿ ಶುಕ್ರವಾರ ದೆಹಲಿಗೆ ತೆರಳಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿ ಅಧಿಕೃತವಾಗಿ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿದ್ದಾರೆ.




Leave a Reply

Your email address will not be published. Required fields are marked *

error: Content is protected !!