ನವದೆಹಲಿ: 2012 ಡಿಸೆಂಬರ್ 16ರಂದು ನಡೆದ ನಿರ್ಭಯಾ ಅತ್ಯಾಚಾರ ಪ್ರಕರಣ ಸಂಬಂಧ ಮರಣದಂಡನೆಯಿಂದ ತಪ್ಪಿಸಿಕೊಳ್ಳಲು ಅಪರಾಧಿಗಳು ಸಾಕಷ್ಟು ಕಸರತ್ತು ನಡೆಸಿದ್ದಾರೆ. ನಾಲ್ವರು ಅಪರಾಧಿಗಳಲ್ಲಿ ಓರ್ವನಾದ ವಿನಯ ಶರ್ಮಾ ಸಲ್ಲಿಸಿದ್ದ ಕ್ಷಮಾದಾನ ಅರ್ಜಿಯನ್ನ ರಾಷ್ಟ್ರಪತಿಗಳು ತಿರಸ್ಕರಿಸಿದ್ದಾರೆ. ಘಟನೆ ನಡೆದ ಸಮಯದಲ್ಲಿ ನಾನು ಬಾಲಕನಾಗಿದ್ದೆ ಅನ್ನೋದು ವಿನಯ ವಾದವಾಗಿದೆ.
ಇಂದು ಬೆಳಗ್ಗೆ ರಾಷ್ಟ್ರಪತಿ ರಾಮನಾಥ ಕೋವಿಂದ ಅವರು ಅಪರಾಧಿ ವಿನಯ ಶರ್ಮಾ ಸಲ್ಲಿಸಿದ್ದ ಅರ್ಜಿಯನ್ನ ವಜಾಗೊಳಿಸಿದ್ದಾರೆ. ಇಂದು ಬೆಳಗ್ಗೆ ಅಪರಾಧಿಗಳಿಗೆ ಗಲ್ಲು ಶಿಕ್ಷೆ ನೀಡುವ ಡೆತ್ ವಾರೆಂಟ್ ಹೊರಡಿಸಲಾಗಿತ್ತು. ಆದ್ರೆ, ವಿನಯ ಸಲ್ಲಿಸಿದ್ದ ಕ್ಷಮಾದಾನ ಅರ್ಜಿಯಿಂದಾಗಿ ಪಟಿಯಾಲಾ ಹೌಸ್ ಕೋರ್ಟ್ ಇದಕ್ಕೆ ತಡೆಯಾಜ್ಞೆ ನೀಡಿತ್ತು. ಇದೀಗ ನಾಲ್ವರು ಅಪರಾಧಿಗಳಿಗೆ ಎಂದು ಗಲ್ಲು ಶಿಕ್ಷೆ ಅನ್ನೋದು ತಿಳಿಯಬೇಕಿದೆ.