ಬ್ರೇಕಿಂಗ್ ನ್ಯೂಸ್
Search

ರಾಜ್ಯದ ಮೇಲೂ ನಿವಾರ್ ಎಫೆಕ್ಟ್: ಜನರು ಮನೆಯಿಂದ ಹೊರಬರಲು ಹಿಂದೇಟು

216

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ನಿವಾರ್ ಎಫೆಕ್ಟ್ ರಾಜ್ಯದ ಮೇಲೂ ನಿಧನವಾಗಿ ಆಗ್ತಿದ್ದು, ಹಲವು ಜಿಲ್ಲೆಗಳಲ್ಲಿ ತುಂತುರು ಮಳೆಯಾಗ್ತಿದೆ. ಬಹುತೇಕ ಕಡೆ ಮೋಡ ಮುಸುಕಿದ ವಾತಾವರಣ ನಿರ್ಮಾಣವಾಗಿದೆ. ಕಳೆದ ಎರಡು ದಿನಗಳಿಂದ ಚಳಿಯೂ ಸಹ ಜೋರಾಗಿದ್ದು, ಜನರು ಹೈರಾಣಾಗಿದ್ದಾರೆ.

ವಾತಾವರಣ ಸಂಪೂರ್ಣವಾಗಿ ತಂಪಾಗಿದ್ದು, ಸೂರ್ಯನ ದರ್ಶನ ಮಾತ್ರವಿಲ್ಲ. ಇದ್ರಿಂದಾಗಿ ಜನರು ಮನೆಯಿಂದ ಹೊರ ಬರಲು ಹಿಂದೇಟು ಹಾಕ್ತಿದ್ದಾರೆ. ಹೀಗಾಗಿ ವ್ಯಾಪಾರ ವಹಿವಾಟು ಸಹ ಎಂದಿನಂತೆ ನಡೆಯುತ್ತಿಲ್ಲ. ಸರ್ಕಾರಿ ಕಚೇರಿಗಳು ಸಹ ಬೀಕೋ ಎನ್ನುತ್ತಿವೆ. ನಿವಾರ್ ಚಂಡಮಾರುತದ ಪರಿಣಾಮ ರಾಜ್ಯದಲ್ಲಿಯೂ ಇನ್ನು ಎರಡ್ಮೂರು ದಿನ ಮುಂದುವರೆಯುವ ಸಾಧ್ಯತೆಯಿದೆ.




Leave a Reply

Your email address will not be published. Required fields are marked *

error: Content is protected !!