ಬಳ್ಳಾರಿ: ದೆಹಲಿಯ ನಿಜಾಮುದ್ದೀನ್ ಮಸೀದಿಯಲ್ಲಿ ನಡೆದ ಧಾರ್ಮಿಕ ಸಭೆಯಲ್ಲಿ ಭಾಗವಹಿಸಿದವರು ಇಂದು ಸಂಜೆ 6 ಗಂಟೆಯೊಳಗೆ ಮಾಹಿತಿ ನೀಡಬೇಕು. ಇಲ್ಲದೆ ಹೋದ್ರೆ ಕಾನೂನು ಕ್ರಮಗಳನ್ನ ತೆಗೆದುಕೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಎಚ್ಚರಿಕೆ ನೀಡಿದ್ದಾರೆ.
ಬಳ್ಳಾರಿ ಜಿಲ್ಲೆಯಿಂದ ಯಾರೆಲ್ಲ ಧಾರ್ಮಿಕ ಸಭೆಗೆ ಹೋಗಿದ್ದೀರಿ ಅನ್ನೋದು ಕುರಿತು ಜಿಲ್ಲಾ ಕಂಟ್ರೋಲ್ ರೂಂಗೆ ಕರೆ ಮಾಡಿ ತಿಳಿಸಬೇಕು. ಇಲ್ಲದಿದ್ದರೆ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ನಕುಲ ತಿಳಿಸಿದ್ದಾರೆ. ಇಷ್ಟು ದಿನಗಳ ಕಾಲ ಜಿಲ್ಲಾಡಳಿತ, ಪೊಲೀಸ್ ಇಲಾಖೆ ಹಾಗೂ ಆರೋಗ್ಯ ಇಲಾಖೆ ಮಾಹಿತಿ ಕಲೆ ಹಾಕ್ತಿತ್ತು. ಇದೀಗ ಅವರಿಗೆ ಮಾಹಿತಿ ಕೊಡಲು ಹೇಳಿದ್ದಾರೆ.