ಮತ್ತೆ ಲಾಕ್ ಡೌನ್ ಪ್ರಶ್ನೆಯೇ ಇಲ್ಲ: ಡಾ.ಸುಧಾಕರ

382

ಪ್ರಜಾಸ್ತ್ರ ಸುದ್ದಿ

ಕಲಬುರಗಿ: ಎಲ್ಲೆಡೆ ಕರೋನಾ ಹೆಚ್ಚಾಗ್ತಿರುವ ಹಿನ್ನೆಲೆಯಲ್ಲಿ ಮತ್ತೆ ಲಾಕ್ ಡೌನ್ ಮಾಡಲಾಗುತ್ತೆ ಅನ್ನೋ ಸುದ್ದಿ ಎಲ್ಲೆಡೆ ಹರಿದಾಡ್ತಿದೆ. ಜನರು ಈ ಬಗ್ಗೆ ಗೊಂದಲಕ್ಕೆ ಒಳಗಾಗಿದ್ದಾರೆ. ಈ ಬಗ್ಗೆ ಮಾತ್ನಾಡಿರುವ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ ಇದೆಲ್ಲ ವದಂತಿ ಎಂದಿದ್ದಾರೆ.

ಮುಂದಿನ ದಿನಗಳಲ್ಲಿ ಲಾಕ್ ಡೌನ್ ಮಾಡುವ ಪ್ರಶ್ನೆಯೇ ಇಲ್ಲ. ಜೂನ್ 16 ಹಾಗೂ 17 ರಂದು ಪ್ರಧಾನಿ ಎಲ್ಲ ರಾಜ್ಯಗಳ ಸಿಎಂ ಜೊತೆ ನಡೆಸುವ ವಿಡಿಯೋ ಸಂವಾದಲ್ಲಿ, ಸಿಎಂ ಬಿಎಸ್ವೈ ಭಾಗವಹಿಸಲಿದ್ದಾರೆ. ಕರೋನಾ ಪರಿಸ್ಥಿತಿಯನ್ನ ನಿಭಾಯಿಸುವ ಕುರಿತು ಪ್ರಧಾನಿ ಜೊತೆ ಸಿಎಂ ಮಾತ್ನಾಡಲಿದ್ದಾರೆ ಎಂದಿದ್ದಾರೆ.

ಕರೋನಾ ಸೋಂಕು ಹೆಚ್ಚಾಗ್ತಿರುವ ಹಿನ್ನೆಲೆಯಲ್ಲಿ ಮತ್ತೊಮ್ಮೆ ಲಾಕ್ ಡೌನ್ ಮಾಡಲಾಗುತ್ತೆ ಅನ್ನೋ ಚರ್ಚೆ ನಡೆದಿದೆ. ಆದ್ರೆ, ಇದೆಲ್ಲ ಊಹಾಪೋಹ. ಇದ್ಯಾವುದೂ ಸತ್ಯವಲ್ಲ. ಮತ್ತೊಮ್ಮೆ ಲಾಕ್ ಡೌನ್ ಮಾಡುವ ಪ್ರಶ್ನೆಯೇ ಇಲ್ಲವೆಂದು ವೈದ್ಯಕೀಯ ಶಿಕ್ಷಣ ಸಚಿವರು ಹೇಳಿದ್ದಾರೆ.




Leave a Reply

Your email address will not be published. Required fields are marked *

error: Content is protected !!