ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ರಸ್ತೆ ಸಾರಿಗೆ ನೌಕರರು ಬುಧವಾರ ಪ್ರತಿಭಟನೆ ನಡೆಸ್ತಾರೆ. ಇದ್ರಿಂದ ಸಂಚಾರ ಸಮಸ್ಯೆ ಎದುರಾಗುತ್ತೆ ಅನ್ನೋ ಚಿಂತೆಯಲ್ಲಿ ಜನರಿದ್ರು. ಇದ್ರಿಂದ ಯಾವುದೇ ಸಮಸ್ಯೆಯಾಗದಂತೆ ಸರ್ಕಾರ ನೋಡಿಕೊಳ್ತಿದೆ.
ಇನ್ನು ಬಿಎಂಟಿಸಿ ನೌಕರರು ಯಾವುದೇ ರೀತಿಯ ಪ್ರತಿಭಟನೆ ಮಾಡುತ್ತಿಲ್ಲ. ಅವರ ಸಂಘಟನೆ ವತಿಯಿಂದ ಮನವಿ ಪತ್ರ ನೀಡಲಾಗ್ತಿದೆ. ಇದ್ರಿಂದಾಗಿ ಪ್ರಯಾಣಿಕರಿಗೆ ನೆಮ್ಮದಿ ಸಿಕ್ಕಿದೆ. ಬುಧವಾರ ಮಧ್ಯಾಹ್ನ 2 ಗಂಟೆಗೆ ಬಿಎಂಟಿಸಿ ಎಂಡಿ ಶಿಖಾ ಅವರಿಗೆ ಮನವಿ ಪತ್ರ ಸಲ್ಲಿಸಲಿದ್ದಾರೆ.